ADVERTISEMENT

ಕೋರ್ಟ್ ತೀರ್ಪಿನ ನಂತರ ಬಿಜೆಪಿ ಸೇರ್ಪಡೆ?: ಅನರ್ಹ ಶಾಸಕ ಪ್ರತಾಪ್‌ಗೌಡ ಪಾಟೀಲ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2019, 11:07 IST
Last Updated 18 ಆಗಸ್ಟ್ 2019, 11:07 IST
   

ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಬಿಜೆಪಿ ಸೇರುವ ಬಗ್ಗೆ ಅನರ್ಹ ಶಾಸಕರೆಲ್ಲ ಒಟ್ಟಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್‌ಗೌಡ ಪಾಟೀಲ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭಾನುವಾರ ಭೇಟಿಯಾಗಿ ಚರ್ಚಿಸಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಹಿಂದಿನ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ನಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಆದರೆ ಕೋರ್ಟ್‌ನಲ್ಲಿ ತೀರ್ಪು ನಮ್ಮ ಪರವಾಗಿ ಬರಲಿದೆ. ನಂತರ ಬಿಜೆಪಿ ಬಿಜೆಪಿ ಸೇರುವ ಬಗ್ಗೆ ನಿರ್ಧರಿಸಲಾಗುವುದು. ಈಗ ಪಕ್ಷ ಸೇರುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕುಟುಂಬದವರನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾನೇ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಅನರ್ಹರಾದರೆ ಸ್ಪರ್ಧಿಸಬಾರದು ಎಂಬ ನಿಯಮವಿಲ್ಲ’ ಎಂದು ಹೇಳಿದರು.

‘ಮುಖ್ಯಮಂತ್ರಿ ಜತೆಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇನೆ. ರಾಜಕೀಯ ಚರ್ಚೆ ಮಾಡಿಲ್ಲ’ ಎಂದಿದ್ದಾರೆ.

ಸಚಿವ ಸಂಪುಟ ರಚನೆಗೆ ಬಿಜೆಪಿ ಕೇಂದ್ರ ನಾಯಕರು ಒಪ್ಪಿಗೆ ನೀಡಿದ ನಂತರ ಬಿಜೆಪಿ ವಲದಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಅನರ್ಹ ಶಾಸಕರು ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಚಿವ ಸ್ಥಾನದ ಬಗ್ಗೆ ಚರ್ಚಿಸುತ್ತಿದ್ದಾರೆ.

‘ಈಗ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವುದರಿಂದ ಮೊದಲ ಸುತ್ತಿನಲ್ಲಿ ಸಚಿವರನ್ನಾಗಿ ಮಾಡುವುದು ತಪ್ಪಾಗುತ್ತದೆ. ಮೊದಲ ಹಂತದಲ್ಲಿ ಕೆಲವು ಸಚಿವ ಸ್ಥಾನಗಳನ್ನು ಮಾತ್ರ ಭರ್ತಿ ಮಾಡುತ್ತಿದ್ದು, ಕೆಲವು ಸ್ಥಾನಗಳನ್ನು ಖಾಲಿ ಉಳಿಸಿಕೊಳ್ಳಲಾಗುತ್ತದೆ. ಅನರ್ಹತೆ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿದ್ದು, ತೀರ್ಪು ಬಂದ ನಂತರ ನಿಮಗೂ ಅವಕಾಶ ನೀಡಲಾಗುತ್ತದೆ’ ಎಂದು ತಮ್ಮ ಭೇಟಿ ಮಾಡುತ್ತಿರುವ ಅನರ್ಹ ಶಾಸಕರಿಗೆ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.