ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಬಿಬಿಎಂಪಿ ಸಿಬ್ಬಂದಿ, ಅಧಿಕಾರಿಗಳು, ಪೌರಕಾರ್ಮಿಕರ ಕುಟುಂಬದವರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಅವರಿಗೆ ಬಿಜೆಪಿ ಮುಖಂಡ ಎ.ಎಚ್.ಬಸವರಾಜುಮನವಿ ಮಾಡಿದ್ದಾರೆ.
'ಕೊರೊನಾದಿಂದ ಮೃತಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕುಟುಂಬದವರಿಗೆ ಸರ್ಕಾರ ಇಲಾಖೆಗಳ ಮೂಲಕ ಪರಿಹಾರ ನೀಡಲಾಗಿದೆ. ಅಂತೆಯೇ ಕೊರೊನಾದಿಂದ ಮರಣ ಹೊಂದಿದ ಬಿಬಿಎಂಪಿ ಸಿಬ್ಬಂದಿಯ ಕುಟುಂಬದವರಿಗೆ ಪಾಲಿಕೆಯಿಂದಲೇ ಪರಿಹಾರ ನೀಡಬೇಕು.ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಆದೇಶ ಹೊರಡಿಸಬೇಕು' ಎಂದು ಅವರು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.