ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ಬಜೆಟ್ಗೆ ಅನುಮೋದನೆ ಸಿಗದೆ ಇರುವುದರ ನೇರ ಪರಿಣಾಮ ಗೋಚರವಾಗಿದ್ದು, ಅನುದಾನಿತಪದವಿಪೂರ್ವ ಕಾಲೇಜುಗಳ ಸಿಬ್ಬಂದಿಗೆ ಜೂನ್ ತಿಂಗಳ ಸಂಬಳವೇ ಸಿಕ್ಕಿಲ್ಲ.
‘ಆರ್ಥಿಕ ಇಲಾಖೆಯಿಂದ 2ನೇ ತ್ರೈಮಾಸಿಕ ಕಂತಿನ ಹಣ ಬಿಡುಗಡೆ ಆಗದ ಕಾರಣ ಈ ತೊಂದರೆ ಉಂಟಾಗಿದೆ. ಅಧಿವೇಶನದಲ್ಲಿ ಬಜೆಟ್ಗೆ ಅನುಮತಿ ಸಿಕ್ಕಿದ ನಂತರ ಹಣ ಬಿಡುಗಡೆ ಮಾಡುತ್ತೇವೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ’ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಬಸಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.