ADVERTISEMENT

'ಪೌರಕಾರ್ಮಿಕರಿಗೆ ಇಎಸ್‍ಐ, ಪಿಂಚಣಿ ನೀಡಿ'

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 19:36 IST
Last Updated 12 ಜುಲೈ 2020, 19:36 IST

ಬೆಂಗಳೂರು: ಪೌರಕಾರ್ಮಿಕರಿಗೆ ಇಎಸ್‍ಐ ಹಾಗೂ ಪಿಂಚಣಿ ಸೌಲಭ್ಯ ನೀಡಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‍ಎಸ್) ಒತ್ತಾಯಿಸಿದೆ.

'ಕೋವಿಡ್-19 ಸಂಕಷ್ಟದ ನಡುವೆಯೂ ಸೋಂಕು ತಡೆಯುವ ಉದ್ದೇಶದಿಂದ ಸ್ವಚ್ಛತಾ ಕಾರ್ಯಗಳಲ್ಲಿ ನಿರತರಾಗಿರುವ ಪೌರಕಾರ್ಮಿಕರಿಗೆ ಅಗತ್ಯ ಸುರಕ್ಷಾ ಸಾಮಗ್ರಿಗಳಿಲ್ಲ. ಜೀವ ಭದ್ರತೆಯೂ ಇಲ್ಲ. ನಗರದಲ್ಲಿ 23 ಮಂದಿಗೆ ಸೋಂಕು ತಗುಲಿರುವುದು ಇದಕ್ಕೆ ಸಾಕ್ಷಿ' ಎಂದು ಸಂಘಟನೆ ಬೆಂಗಳೂರು ನಗರ ಜಿಲ್ಲಾ ಸಮಿತಿ ಕಾರ್ಯದರ್ಶಿ ಎ.ಶಾಂತಾ ದೂರಿದ್ದಾರೆ.

'ಪೌರಕಾರ್ಮಿಕರ ಕುಟುಂಬಗಳಿಗೆ ಉಚಿತ ಆರೋಗ್ಯ ತಪಾಸಣೆ, ಸೋಂಕಿತರಿಗೆ ಉಚಿತ ಚಿಕಿತ್ಸೆ ಹಾಗೂ ಪೂರ್ಣ ವೇತನ ನೀಡಬೇಕು‘ ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.