ಕೆ.ಆರ್.ಪುರ: ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯಾಗದೆ ಕಾಣದೇ ಪಾಳುಬಿದ್ದಿದ್ದ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಶಾಸಕ ಬೈರತಿ ಬಸವರಾಜ್ ಅವರು ಬಿಬಿಎಂಪಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಬಸವರಾಜ್ ಮಾತನಾಡಿ, ‘ಕೆ.ಆರ್.ಪುರದ ಟ್ಯಾಂಕ್ ರಸ್ತೆಯಲ್ಲಿ ಭವನದ ಕಾಮಗಾರಿ 2014ರಲ್ಲಿ ಪೂರ್ಣಗೊಂಡಿದೆ. ಆದರೆ ಮೂಲಸೌಕರ್ಯದ ಕೊರತೆ ಕಾರಣಕ್ಕೆ ಭವನವನ್ನು ಉದ್ಘಾಟಿಸಿರಲಿಲ್ಲ. ಈಗ ಸಮಾಜ ಕಲ್ಯಾಣ ಇಲಾಖೆ ₹25 ಲಕ್ಷ ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಸಮುದಾಯ ಭವನಕ್ಕೆ ಮೂಲಸೌಕರ್ಯ ಒದಗಿಸಲಾಗುವುದು. ತಿಂಗಳ ಒಳಗಾಗಿ ಭವನವನ್ನು ಉದ್ಘಾಟಿಸಲಾಗುವುದು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.