ADVERTISEMENT

ರಾಮೋಹಳ್ಳಿ: ಅಂಬೇಡ್ಕರ್‌ ಭವನ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 19:11 IST
Last Updated 6 ಜುಲೈ 2020, 19:11 IST
ರಾಮೋಹಳ್ಳಿಯಲ್ಲಿ ಅಂಬೇಡ್ಕರ್ ಸಮುದಾಯ ಭವನವನ್ನು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಬಿ.ಎಸ್.ರೂಪಾ ವೇಣುಗೋಪಾಲ್ ಉದ್ಘಾಟಿಸಿದರು. ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಪಾರ್ವತಿ ಚಂದ್ರಪ್ಪ, ಜಿಲ್ಲಾ ಪಂಚಾಯ್ತಿ ಸದಸ್ಯೆ ಲತಾ ಹನುಮಂತೇಗೌಡ, ರಾಮೋಹಳ್ಳಿ ರೈತ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ ವಿ.ವೇಣುಗೋಪಾಲ್ ಇತರರು ಇದ್ದರು
ರಾಮೋಹಳ್ಳಿಯಲ್ಲಿ ಅಂಬೇಡ್ಕರ್ ಸಮುದಾಯ ಭವನವನ್ನು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಬಿ.ಎಸ್.ರೂಪಾ ವೇಣುಗೋಪಾಲ್ ಉದ್ಘಾಟಿಸಿದರು. ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಪಾರ್ವತಿ ಚಂದ್ರಪ್ಪ, ಜಿಲ್ಲಾ ಪಂಚಾಯ್ತಿ ಸದಸ್ಯೆ ಲತಾ ಹನುಮಂತೇಗೌಡ, ರಾಮೋಹಳ್ಳಿ ರೈತ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ ವಿ.ವೇಣುಗೋಪಾಲ್ ಇತರರು ಇದ್ದರು   

ರಾಜರಾಜೇಶ್ವರಿನಗರ: ‘ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಹೆಸರಿನಲ್ಲಿ ನಿರ್ಮಿಸಿರುವ ಸಮುದಾಯ ಭವನವು ಒಳ್ಳೆಯ ಕೆಲಸಗಳಿಗೆ ಬಳಕೆಯಾಗಲಿ’ ಎಂದು ರಾಮೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್. ರೂಪಾ ವೇಣುಗೋಪಾಲ್‌ ಹೇಳಿದರು.

ರಾಮೋಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಪಾರ್ವತಿ ಚಂದ್ರಪ್ಪ, ‘ಎಲ್ಲ ಸಮುದಾಯಗಳಿಗೆ ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸಿಕೊಟ್ಟ ಅಂಬೇಡ್ಕರ್ ಅವರ ತೋರಿದ ಹಾದಿಯಲ್ಲಿ ಎಲ್ಲರೂ ನಡೆದು ನೆಮ್ಮದಿಯ ಸಮಾಜ ನಿರ್ಮಿಸೋಣ’ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಸದಸ್ಯೆ ಲತಾ ಹನುಮಂತೇಗೌಡ ಮಾತನಾಡಿದರು. ರಾಮೋಹಳ್ಳಿ ರೈತ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ ವಿ.ವೇಣುಗೋಪಾಲ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಲತಾ ಪರಮಶಿವಯ್ಯ, ಸದಸ್ಯರಾದ ಲಕ್ಷ್ಮೀಪತಿ, ಚೇತನ್, ಮುಖಂಡ ಎಂ.ಚಂದ್ರಪ್ಪ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.