ADVERTISEMENT

ಕೆ.ಆರ್‌.ಪುರ: ಸಂವಿಧಾನ ಉಳಿಸಲು ಹೋರಾಟ ಅನಿವಾರ್ಯ- ಡಿ.ಕೆ. ಮೋಹನ್

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2023, 16:17 IST
Last Updated 6 ಡಿಸೆಂಬರ್ 2023, 16:17 IST
ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಮತ್ತು ಅತಿಥಿಗಳು ಪುಷ್ಪ ನಮನ ಸಲ್ಲಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಮತ್ತು ಅತಿಥಿಗಳು ಪುಷ್ಪ ನಮನ ಸಲ್ಲಿಸಿದರು.   

ಕೆ.ಆರ್‌.ಪುರ: ಭಾರತ ದೇಶದ ಸಂವಿಧಾನವು ಶೋಷಿತರ, ದಿನ ದಲಿತರ, ತುಳಿತಕ್ಕೆ ಒಳಗಾದವರ ಪರವಾಗಿ ಇರುವಂತಹ ಪವಿತ್ರ ಗ್ರಂಥ. ಅದನ್ನು ನೀಡಿದವರು ಅಂಬೇಡ್ಕರ್‌ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್ ಹೇಳಿದರು.

ಕೆ.ಆರ್.ಪುರ ಸಮೀಪದ ಹೊರಮಾವು ಜಯಂತಿನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಅಂಗವಾಗಿ  ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ನಿರಂತರ ಶೋಷಣೆಗೆ ಒಳಗಾಗಿರುವ ಜನರು ತಮ್ಮ ಹಕ್ಕುಗಳನ್ನು ಪಡೆಯಲು ಸಂವಿಧಾನ ಮೂಲಧಾರವಾಗಿದೆ. ಸಂವಿಧಾನ ಉಳಿಸಲು ಹೋರಾಟ ಅನಿವಾರ್ಯ ಎಂದರು.

ADVERTISEMENT

ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್, ಬ್ಲಾಕ್ ಅಧ್ಯಕ್ಷ ಸಿ.ವೆಂಕಟೇಶ್, ಮುಖಂಡರಾದ ಅಗರ ಪ್ರಕಾಶ್, ನಂಜಪ್ಪ, ಮುನಿರಾಜು, ಪ್ರಸನ್ನ, ಸೆಬಾಸ್ಟಿನ್, ಸವಿತಾ, ಸುನೀಲ್ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.