ಬೆಂಗಳೂರು: ಕೋವಿಡ್ನಿಂದ ತೀರಿಕೊಂಡ ಮಹಿಳೆಯೊಬ್ಬರ ಮೃತದೇಹವನ್ನು ಸಾಗಿಸಲು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದ ಆಂಬುಲೆನ್ಸ್ ಚಾಲಕನನ್ನು ತಹಶೀಲ್ದಾರ್ ನೇತೃತ್ವದ ತಂಡ ವಶಕ್ಕೆ ಪಡೆದು, ತಾವರೆಕೆರೆ ಪೊಲೀಸರ ಸುಪರ್ದಿಗೆ ನೀಡಿದೆ.
ನಗರದಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು ಅಂತ್ಯಕ್ರಿಯೆ ಸ್ಥಳಕ್ಕೆ ತೆಗೆದುಕೊಂಡು ಹೋಗಲು ಆಂಬುಲೆನ್ಸ್ ಚಾಲಕ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಮಹಿಳೆಯ ಸಂಬಂಧಿಕರು, ನಿಯಂತ್ರಣ ಕೊಠಡಿಗೆ ದೂರು ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಶಿವಪ್ಪ ಲಮಾಣಿ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ನಾಗವೇಣಿ, ಕಂದಾಯ ಅಧಿಕಾರಿ ದೀಪಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಆಂಬುಲೆನ್ಸ್ ಪತ್ತೆ ಮಾಡಿದೆ.
‘ಅಂತ್ಯಕ್ರಿಯೆ ಸ್ಥಳದಲ್ಲಿ ಶೋಧ ನಡೆಸಿ ಆಂಬುಲೆನ್ಸ್ ಪತ್ತೆ ಮಾಡಲಾಯಿತು. ಅದನ್ನು ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಲಾಗಿದೆ’ ಎಂದು ತಂಡದ ಸದಸ್ಯರೊಬ್ಬರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.