ADVERTISEMENT

‘ಅನಂತಕುಮಾರ್‌ ಪ್ರತಿಷ್ಠಾನ’ ಉದ್ಘಾಟನೆ ನಾಳೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 19:40 IST
Last Updated 20 ಸೆಪ್ಟೆಂಬರ್ 2019, 19:40 IST

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಅನಂತ ಕುಮಾರ್‌ ಜನ್ಮದಿನಾಚರಣೆ ಅಂಗವಾಗಿ ಪ್ರೊ.ಪಿ.ವಿ.ಕೃಷ್ಣಭಟ್ ನೇತೃತ್ವದಲ್ಲಿ ಸೆಪ್ಟೆಂಬರ್‌ 22ರಂದು ಮಧ್ಯಾಹ್ನ 3 ಗಂಟೆಗೆ ‘ಅನಂತಕುಮಾರ್ ಪ್ರತಿಷ್ಠಾನ’ದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜಗತ್ಪ್ರಕಾಶ್ನಡ್ಡಾ, ಅನಂತಕುಮಾರ್‌ ಪತ್ನಿ ತೇಜಸ್ವಿನಿ ಅನಂತಕುಮಾರ್‌ ಭಾಗಿಯಾಗಲಿದ್ದಾರೆ. ಇದೇ ವೇಳೆ ಬಡ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಮಾಡಲಾಗುವುದು.

ಸ್ಥಳ–ಮಂಗಳ ಸಭಾಮಂಟಪ, ಎನ್‌ಎಂಕೆಆರ್‌ವಿ ಕಾಲೇಜು ಆವರಣ, ಜಯನಗರ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.