ಬೆಂಗಳೂರು: ಮೈಸೂರು ರಸ್ತೆ, ಕನಕಪುರ ರಸ್ತೆ, ವಿಮಾನ ನಿಲ್ದಾಣ ರಸ್ತೆ, ಹೊಸೂರು ರಸ್ತೆ ಹಾಗೂ ಕೋಲಾರ ರಸ್ತೆಗಳಲ್ಲಿ ಆಧುನಿಕ ತಂತ್ರಜ್ಞಾನದ ಎಪಿಎಂಸಿ (ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ) ಮಾರುಕಟ್ಟೆ ನಿರ್ಮಿಸಲಾಗುವುದುಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಇಲ್ಲಿ ಮಂಗಳವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ಬೆಂಗಳೂರು ಸುತ್ತಮುತ್ತ ಕನಿಷ್ಠ 20 ಸ್ಥಳಗಳಲ್ಲಿ ಹೊಸದಾಗಿ ಎಪಿಎಂಸಿ ಮಾರುಕಟ್ಟೆ ನಿರ್ಮಿಸುವುದಕ್ಕಾಗಿ ಸರ್ಕಾರಿ ಜಮೀನನ್ನು ಗುರುತಿಸಲು ಸೂಚಿಸಿದರು.
ಸಿಂಗೇನ ಅಗ್ರಹಾರದ 42 ಎಕರೆ ಭೂಸ್ವಾಧೀನ ಪ್ರಸ್ತಾವಕ್ಕೆ ಅನುಮೋದನೆ ನೀಡುವಂತೆ ಸೂಚಿಸಿದರು. ನ್ಯಾಯಾಲಯಗಳಲ್ಲಿ ಬಾಕಿ ಇರುವ ಭೂಸ್ವಾಧೀನ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸೂಚಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.