ಬೆಂಗಳೂರು: ‘ಚಲನಚಿತ್ರ ನಟ ಚೇತನ್ ಅಹಿಂಸಾ ಅವರಿಗೆ ಸರ್ಕಾರದಿಂದ ಅಂಗರಕ್ಷಕರನ್ನು ನೇಮಿಸಿ, ಅವರ ಮೇಲಿನ ಪ್ರಕರಣಗಳನ್ನು ಕೈಬಿಡಬೇಕು’ ಎಂದು ದಲಿತ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ನಾಗರಾಜು ಆಗ್ರಹಿಸಿದ್ದಾರೆ.
ಈ ಸಂಬಂಧ ಸಮಿತಿ ಫೆ.14ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದೆ. ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚೇತನ್ ಅವರು ಸಮಾನತೆಯ ಹರಿಕಾರರಾಗಿದ್ದಾರೆ. ಅವರಿಗೆ ಇತ್ತೀಚಿನ ದಿನಗಳಲ್ಲಿ ಬೆದರಿಕೆ ಕರೆಗಳು ಜಾಸ್ತಿಯಾಗುತ್ತಿವೆ. ಆದ್ದರಿಂದ ಅವರಿಗೆ ಅಂಗರಕ್ಷಕರನ್ನು ನೇಮಕ ಮಾಡಬೇಕು. ಫೆ.14ರೊಳಗೆ ಬೇಡಿಕೆ ಈಡೇರಿಸದಿದ್ದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.