ಬೆಂಗಳೂರು: ರಾಜ್ಯ ಸರ್ಕಾರ ಹೊಸತಾಗಿ ರಚಿಸಿರುವ ನಾಲ್ಕು ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ.
ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ ರಸಾಯನ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಪ್ರೊ.ಎಲ್. ಗೋಮತಿ ದೇವಿ, ರಾಯಚೂರು ಕ್ಲಸ್ಟರ್ ವಿಶ್ವವಿದ್ಯಾಲಯಕ್ಕೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಹರೀಶ್ ರಾಮಸ್ವಾಮಿ, ಬೆಂಗಳೂರು ನೃಪತುಂಗ ಕ್ಲಸ್ಟರ್ ವಿಶ್ವ ವಿದ್ಯಾಲಯಕ್ಕೆ ಬಾಗಲಕೋಟೆ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಶ್ರೀನಿವಾಸ್ ಎಸ್. ಬಾಲಿ, ಮಂಡ್ಯ ಕ್ಲಸ್ಟರ್ ವಿಶ್ವ ವಿದ್ಯಾಲಯಕ್ಕೆ ಎಸ್ಜೆಬಿ ತಾಂತ್ರಿಕ ಸಂಸ್ಥೆಯ ಪ್ರಾಂಶುಪಾಲ ಡಾ.ಪುಟ್ಟರಾಜು ಅವರನ್ನು ಕುಲಪತಿ ಹುದ್ದೆಗೆ ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.
ಈ ಹಿಂದೆ ಕೆಲವು ಕ್ಲಸ್ಟರ್ ವಿಶ್ವವಿದ್ಯಾಲಯಗಳಿಗೆ ಆಡಳಿತಾತ್ಮಕ ದೃಷ್ಟಿಯಿಂದ ವಿಶೇಷಾಧಿಕಾರಿಗಳನ್ನು ನೇಮಕ ಮಾಡಲಾಗುತಿತ್ತು. ಇದೇ ಮೊದಲ ಬಾರಿಗೆ ಕುಲಪತಿ ಆಯ್ಕೆ ಮಾಡಲಾಗಿದೆ. ಕ್ಲಸ್ಟರ್ ವಿಶ್ವವಿದ್ಯಾಲಯಗಳ ಕುಲಪತಿಗಳ ಅಧಿಕಾರವಧಿ 4 ವರ್ಷ ಅಥವಾ 67 ವರ್ಷ ವಯೋಮಿತಿ ಯಾವುದು ಮೊದಲೊ ಅಲ್ಲಿಯವರೆಗೂ ಮುಂದುವರೆಯಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.