ADVERTISEMENT

ಪಕ್ಷ ಸಂಘಟನೆಗೆ ಕಾರ್ಯಕರ್ತರ ಪಾತ್ರ ಮಹತ್ವ: ಅರವಿಂದ ಲಿಂಬಾವಳಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 18:58 IST
Last Updated 24 ಜುಲೈ 2021, 18:58 IST
ಕಾರ್ಯಕಾರಿಣಿ ಸಭೆಯನ್ನು ಸಚಿವ ಅರವಿಂದ ಲಿಂಬಾವಳಿ ಉದ್ಘಾಟಿಸಿದರು. ಬಿಜೆಪಿ ಮುಖಂಡರಾದ ಮಂಜುನಾಥ್, ನಟರಾಜ್, ಕಬಡ್ಡಿ ಪಿಳ್ಳಪ್ಪ, ಚನ್ನಸಂದ್ರ ಚಂದ್ರಶೇಖರ್ ಹಾಗೂ ಇತರರು ಇದ್ದರು.
ಕಾರ್ಯಕಾರಿಣಿ ಸಭೆಯನ್ನು ಸಚಿವ ಅರವಿಂದ ಲಿಂಬಾವಳಿ ಉದ್ಘಾಟಿಸಿದರು. ಬಿಜೆಪಿ ಮುಖಂಡರಾದ ಮಂಜುನಾಥ್, ನಟರಾಜ್, ಕಬಡ್ಡಿ ಪಿಳ್ಳಪ್ಪ, ಚನ್ನಸಂದ್ರ ಚಂದ್ರಶೇಖರ್ ಹಾಗೂ ಇತರರು ಇದ್ದರು.   

ಕೆ.ಆರ್.ಪುರ: ‘ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಬಲಪಡಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಬೇಕು’ ಎಂದು ಅರಣ್ಯ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಹೂಡಿಯಲ್ಲಿ ಆಯೋಜಿಸಿದ್ದ ಮಹದೇವಪುರ ಕ್ಷೇತ್ರ ಗ್ರಾಮಾಂತರ ಮಂಡಲದ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿದರು.

‘ಕ್ಷೇತ್ರದಲ್ಲಿ ಪಕ್ಷದ ನಿರಂತರ ಚಟುವಟಿಕೆಗಳಿಂದ ಸಂಘಟನೆ ಪೂರಕವಾಗಿದೆ. ಯಾವುದೇ ಅಪೇಕ್ಷೆಯಿಲ್ಲದೆ ಪಕ್ಷ ಸಂಘಟನೆಗೆ ಕಾರ್ಯಕರ್ತರು ಒತ್ತು ನೀಡಬೇಕು.ಕ್ಷೇತ್ರದಲ್ಲಿ ಶೇ 95ರಷ್ಟು ಮತದಾರರಿಗೆ ಲಸಿಕೆ ಅಭಿಯಾನದ ಮೂಲಕ ಕೋವಿಡ್‌ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.