ADVERTISEMENT

‘ಅಂಬರ್‌ಗ್ರಿಸ್’ ಅಕ್ರಮ ಸಾಗಣೆ ಇಬ್ಬರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 28 ಜನವರಿ 2022, 20:14 IST
Last Updated 28 ಜನವರಿ 2022, 20:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ತಿಮಿಂಗಿಲದವಾಂತಿಯನ್ನು (ಅಂಬಗ್ರಿಸ್) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿಗಳಾದ ರಿಯಾಜ್ ಅಹ್ಮದ್ ಹಾಗೂ ಮೊಹಮ್ಮದ್ ಗೌಸ್ ಬಂಧಿತರು. ಅವರಿಂದ ಸುಮಾರು ₹ 3 ಕೋಟಿ ಮೌಲ್ಯದ ಅಂಬಗ್ರಿಸ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಹೊರ ರಾಜ್ಯದಲ್ಲಿ ಅಂಬಗ್ರಿಸ್ ಖರೀದಿಸಿ ನಗರಕ್ಕೆ ತಂದಿದ್ದ ಆರೋಪಿಗಳು, ಮಾರಾಟ ಮಾಡಲು ಯತ್ನಿಸುತ್ತಿದ್ದರು.‘

ADVERTISEMENT

‘ಬನಶಂಕರಿ ಬಳಿ ಆರೋಪಿ ಗಳು ಅನುಮಾನಾಸ್ಪದವಾಗಿ ನಿಂತಿದ್ದರು. ಅವರ ಬಗ್ಗೆ ಸ್ಥಳೀ ಯರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋದ ಪೊಲೀಸ್ ಸಿಬ್ಬಂದಿ, ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದರು. ವಿಚಾ ರಣೆ ನಡೆಸಿದಾಗ, ಆರೋಪಿಗಳ ಬಳಿ ಅಂಬಗ್ರಿಸ್ ಇರುವುದು ತಿಳಿ ಯಿತು’ ಎಂದೂ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.