ADVERTISEMENT

ಕೃತಕ ಬುದ್ಧಿಮತ್ತೆ: ಪುನರ್‌ಮನನ

​ಪ್ರಜಾವಾಣಿ ವಾರ್ತೆ
Published 25 ಜುಲೈ 2019, 19:42 IST
Last Updated 25 ಜುಲೈ 2019, 19:42 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಇದೇ 30ರವರೆಗೆ ಕೃತಕ ಬುದ್ಧಿಮತ್ತೆ ಮತ್ತು ಯಂತ್ರಗಳ ತಿಳಿವಳಿಕೆ ವಿಷಯದಲ್ಲಿ ಪುನರ್‌ ಮನನ ಕಾರ್ಯಕ್ರಮ ನಡೆಯುತ್ತಿದ್ದು, ಕುಲಪತಿ ಡಾ.ಕೆ.ಆರ್‌.ವೇಣುಗೋಪಾಲ್‌ ಕಾರ್ಯಕ್ರಮ ಉದ್ಘಾಟಿಸಿದರು.

‘ಭವಿಷ್ಯದಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಷಯಗಳು ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳಲ್ಲಿ ಉತ್ತಮ ಸೇವೆ ನೀಡಬಲ್ಲವು’ ಎಂದು ವೇಣುಗೋಪಾಲ್‌ ಅಭಿಪ್ರಾಯಪಟ್ಟರು.

ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್‌ನ ಪ್ರಾಚಾರ್ಯ ಡಾ.ಎಚ್‌.ಎನ್‌.ರಮೇಶ್‌ ಮಾತನಾಡಿದರು. ಗಣಕಯಂತ್ರ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಪ್ರೊ.ಚಂಪಾ ಎಚ್.ಎನ್., ಹಿರಿಯ ಪ್ರಾಧ್ಯಾಪಕಿ, ಪ್ರೊ ಪಿ. ದೀಪಾ ಶೆಣೈ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.