ADVERTISEMENT

ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ: ಅರವಿಂದ ಲಿಂಬಾವಳಿ

​ಪ್ರಜಾವಾಣಿ ವಾರ್ತೆ
Published 14 ಮೇ 2023, 16:24 IST
Last Updated 14 ಮೇ 2023, 16:24 IST
ಶಾಸಕಿಯಾಗಿ ಆಯ್ಕೆಯಾದ ಮಂಜುಳಾ ಲಿಂಬಾವಳಿ ಅವರಿಗೆ ಬಿಜೆಪಿ ಕಾರ್ಯಕರ್ತರು ಅಭಿನಂದಿಸಿದರು
ಶಾಸಕಿಯಾಗಿ ಆಯ್ಕೆಯಾದ ಮಂಜುಳಾ ಲಿಂಬಾವಳಿ ಅವರಿಗೆ ಬಿಜೆಪಿ ಕಾರ್ಯಕರ್ತರು ಅಭಿನಂದಿಸಿದರು   

ಕೆ.ಆರ್.ಪುರ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿದೆ. ನಾಯಕರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ‌ ಎಂದು ಮಾಜಿ ಶಾಸಕ ಅರವಿಂದ ಲಿಂಬಾವಳಿ ಹೇಳಿದರು.

ಶಾಸಕಿ ಮಂಜುಳಾ ಲಿಂಬಾವಳಿ ಅವರಿಗೆ ಪಕ್ಷದ ಕಾರ್ಯಕರ್ತರು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಫಲಿತಾಂಶದಿಂದ ಬಿಜೆಪಿಗೆ ಆಘಾತವಾಗಿದೆ. ಪಕ್ಷದ ಸಂಘಟನೆ ಹಾಗೂ ಸರ್ಕಾರ ನಡೆಸಿದವರು ಅತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ಹಿರಿಯರ ಕಡೆಗಣನೆ, ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ಧೋರಣೆ ಸೋಲಿಗೆ ಕಾರಣವಾಗಿದೆ ಎಂದು ತಿಳಿಸಿದರು.

ADVERTISEMENT

ಕ್ಷೇತ್ರದ ಅಧ್ಯಕ್ಷ ಮನೋಹರ್ ರೆಡ್ಡಿ, ನಟರಾಜ್, ಪ್ರಧಾನ ಕಾರ್ಯದರ್ಶಿಗಳಾದ ಹೂಡಿ ಪಿಳ್ಳಪ್ಪ, ರಾಜೇಶ್, ಮುಖಂಡರಾದ ರಾಜಾರೆಡ್ಡಿ, ಹೂಡಿ ಮಂಜುನಾಥ್, ಬಿದರಹಳ್ಳಿ ರಾಜೇಶ್, ಅನಂದ್ ಕುಮಾರ್ (ಕಿಟ್ಟಿ), ಕೆ.ವಿ.ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.