ADVERTISEMENT

ಆಶಾ ಕಾರ್ಯಕರ್ತೆಯರ ಸಮಾವೇಶ ಇಂದು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2023, 4:23 IST
Last Updated 14 ಫೆಬ್ರುವರಿ 2023, 4:23 IST

ಬೆಂಗಳೂರು: ಬಾಕಿ ಗೌರವಧನ ಬಿಡುಗಡೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಸಮಾವೇಶ ಶಿಕ್ಷಕರ ಸದನದಲ್ಲಿ ಮಂಗಳವಾರ ನಡೆಯಲಿದೆ.

ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಮಾವೇಶಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಅವರನ್ನು ಆಹ್ವಾನಿಸಲಾಗಿದೆ. ಗಂಭೀರ ಸಮಸ್ಯೆಗಳ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಚಳವಳಿ ನಡೆಸಲಾಗುತ್ತಿದೆ. ಹೋರಾಟದ ಮುಂದುವರಿದ ಭಾಗವಾಗಿ ಈ ಸಮಾವೇಶ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT