ADVERTISEMENT

395 ಫಲಾನುಭವಿಗಳಿಗೆ ‘ಆಶ್ರಯ’ ನಿವೇಶನ

ಗುಟ್ಟೆಪಾಳ್ಯದಲ್ಲಿ ಗುದ್ದಲಿ ಪೂಜೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 19:31 IST
Last Updated 14 ಜೂನ್ 2021, 19:31 IST
ಆಶ್ರಯ ನಿವೇಶನ ಭೂಮಿಯ ನೀಲನಕ್ಷೆಯನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪರಿಶೀಲಿಸಿದರು. ತರಳು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಮುನಾ, ಪಿ.ಡಿ.ಒ.ಭಾರತಿ, ಪವನ್, ವಿನಯ್, ರಿಚರ್ಡ್, ಮಹೇಶ್ ಕುಮಾರ್ ಹಾಗೂ ಇತರರು ಇದ್ದರು.
ಆಶ್ರಯ ನಿವೇಶನ ಭೂಮಿಯ ನೀಲನಕ್ಷೆಯನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪರಿಶೀಲಿಸಿದರು. ತರಳು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಮುನಾ, ಪಿ.ಡಿ.ಒ.ಭಾರತಿ, ಪವನ್, ವಿನಯ್, ರಿಚರ್ಡ್, ಮಹೇಶ್ ಕುಮಾರ್ ಹಾಗೂ ಇತರರು ಇದ್ದರು.   

ಕೆಂಗೇರಿ: ‘ತರಳು ಗ್ರಾಮ ಪಂಚಾಯಿತಿಯ ಗುಟ್ಟೆಪಾಳ್ಯದಲ್ಲಿ 395 ಅರ್ಹ ಫಲಾನುಭವಿಗಳಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಗುಟ್ಟೆಪಾಳ್ಯದಲ್ಲಿ ಆಶ್ರಯ ಯೋಜನೆಯಡಿ ಮಂಜೂರಾಗಿರುವ ಜಮೀನಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಸ್ವಂತ ಸೂರಿಲ್ಲದವರಿಗೆ ನಿವೇಶನ ಹಂಚಿಕೆ ಮಾಡಲು ಗುಟ್ಟೆಪಾಳ್ಯದಲ್ಲಿ 10 ಎಕರೆ ಗುರುತಿಸಲಾಗಿದೆ. ಕೆಲವು ಮಾನದಂಡಗಳ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸಿ, ನಿವೇಶನ ಹಂಚಿಕೆ ಮಾಡಲಾಗುವುದು. ಬಡವರಿಗಾಗಿ ಬಹುಮಹಡಿ ಕಟ್ಟಡ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಹಂಚಿಕೆಯಾಗಲಿದೆ’ ಎಂದು ಹೇಳಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಾಗವೇಣಿ, ‘ಗ್ರಾಮ ಸಭೆಗಳ ಮೂಲಕ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವೇಶನ ರಹಿತರ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ಕಗ್ಗಲೀಪುರ ವ್ಯಾಪ್ತಿಯ 17 ಮಂದಿಗೂ ಇದೇ ಸ್ಥಳದಲ್ಲಿ ನಿವೇಶನ ಕಲ್ಪಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.