ADVERTISEMENT

ನಾಲ್ವರು ಹಿರಿಯರಿಗೆ ಆಶ್ವಾಸನ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2021, 21:11 IST
Last Updated 11 ಸೆಪ್ಟೆಂಬರ್ 2021, 21:11 IST
ಅನಂತ ಹಾವಗೋಡಿ
ಅನಂತ ಹಾವಗೋಡಿ   

ಬೆಂಗಳೂರು: ಮಹಾನಗರದಲ್ಲಿ ಹಿರಿಯ ನಾಗರಿಕರ ಹಿತರಕ್ಷಣೆಗಾಗಿ ಸ್ಥಾಪಿತವಾಗಿರುವ ‘ಆಶ್ವಾಸನ’ ಸಂಸ್ಥೆಯು ನಾಲ್ವರು ಹಿರಿಯ ಮಹನೀಯರಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದೆ.

ಸುಗಮ ಸಂಗೀತ ಕ್ಷೇತ್ರದಲ್ಲಿ ಏಳು ದಶಕಗಳ ಕಾಲ ಸೇವೆ ಸಲ್ಲಿಸಿರುವ ಹೊ.ನಾ. ರಾಘವೇಂದ್ರ ಗರ್ತಿಕೆರೆ (ಗರ್ತಿಕೆರೆ ರಾಘಣ್ಣ), ಹಿಂದೂಸ್ತಾನಿ ಗಾಯಕ ಶಿವಮೊಗ್ಗದ ಎಸ್.ಎಲ್. ವೇಣುಗೋಪಾಲ, ಯಕ್ಷಗಾನ ವೇಷಧಾರಿ ಗೋಕರ್ಣದ ಅನಂತ ಹಾವಗೋಡಿ, ಇಡಗುಂಜಿಯ ರಥ ಶಿಲ್ಪಿ ಗಂಗಾಧರ ಆಚಾರ್ಯ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

‘2006ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅಕ್ಟೋಬರ್‌ನಲ್ಲಿ ಹಿರಿಯರ ದಿನದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಫಲಕ ಮತ್ತು ₹15 ಸಾವಿರ ನಗದು ಬಹುಮಾನ ನೀಡಿ ಮಹನೀಯರನ್ನು ಗೌರವಿಸಲಾಗುವುದು’ ಎಂದು ಆಯ್ಕೆ ಸಮಿತಿಯ ಮುಖ್ಯಸ್ಥ ಜಿ.ಎಸ್. ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.