ADVERTISEMENT

ಮಲ್ಲೇಶ್ವರದ ಅಂಗನವಾಡಿ ಕಾರ್ಯಕರ್ತೆಯರಿಗೆ ಅಶ್ವತ್ಥನಾರಾಯಣ ಫೌಂಡೇಶನ್‌ನಿಂದ ತರಬೇತಿ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 15:51 IST
Last Updated 6 ಜೂನ್ 2020, 15:51 IST
ಶಿಕ್ಷಣತಜ್ಞ ಡಾ. ಗುರುರಾಜ ಕರಜಗಿ ಅವರ ಜತೆ ಡಿಸಿಎಂ ಅಶ್ವತ್ಥನಾರಾಯಣ ಸಮಾಲೋಚನೆ
ಶಿಕ್ಷಣತಜ್ಞ ಡಾ. ಗುರುರಾಜ ಕರಜಗಿ ಅವರ ಜತೆ ಡಿಸಿಎಂ ಅಶ್ವತ್ಥನಾರಾಯಣ ಸಮಾಲೋಚನೆ    

ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರಿಗೆ ಡಾ. ಅಶ್ವತ್ಥನಾರಾಯಣ ಫೌಂಡೇಶನ್‌ ವತಿಯಿಂದ ಪ್ರಿ ನರ್ಸರಿ ಟೀಚರ್ಸ್‌ ಟ್ರೈನಿಂಗ್ ಹಾಗೂ ಮಕ್ಕಳ ನಿರ್ವಹಣೆ ಕುರಿತು ತರಬೇತಿ ನೀಡಲು ನಿರ್ಧರಿಸಲಾಗಿದೆ.

ಈ ಕುರಿತಂತೆ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ಶನಿವಾರ ಖ್ಯಾತ ಶಿಕ್ಷಣತಜ್ಞ ಡಾ. ಗುರುರಾಜ ಕರಜಗಿ ಅವರ ಜತೆ ಸಮಾಲೋಚನೆ ನಡೆಸಿದರು. ತರಬೇತಿ ನೀಡಲು ಡಾ. ಕರಜಗಿ ಸಮ್ಮತಿ ಸೂಚಿಸಿದ್ದಾರೆ.

ಮಾತುಕತೆ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ, "ಅಂಗನವಾಡಿ ಕಾರ್ಯಕರ್ತೆಯರ ತರಬೇತಿಗೆ ತಗಲುವ ವೆಚ್ಚವನ್ನು ಡಾ. ಅಶ್ವತ್ಥನಾರಾಯಣ ಫೌಂಡೇಶನ್‌ ಭರಿಸಲಿದೆ. ಡಾ.ಗುರುರಾಜ ಕರಜಗಿ ನೇತೃತ್ವ ಸಂಸ್ಥೆ ಬೋಧನಾ ಕೌಶಲ, ಸಣ್ಣ ಮಕ್ಕಳ ನಿರ್ವಹಣೆ, ಅವರ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರದ ಕುರಿತು ತರಬೇತಿ ನೀಡಲಿದೆ. ಶೀಘ್ರದಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಡಾ. ಕರಜಗಿ ಅವರು ಈ ಜವಾಬ್ದಾರಿ ವಹಿಸಿಕೊಂಡಿರುವುದು ಬಹಳ ಸಂತಸದ ವಿಷಯ,"ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.