ADVERTISEMENT

ಹೃದಯಾಘಾತದಿಂದ ಎಎಸ್‌ಐ ಸಾವು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 17:00 IST
Last Updated 27 ಫೆಬ್ರುವರಿ 2021, 17:00 IST
ರಂಗಸ್ವಾಮಿ
ರಂಗಸ್ವಾಮಿ   

ಬೆಂಗಳೂರು: ಜೆ.ಸಿ.ನಗರ ಪೊಲೀಸ್ ಠಾಣೆಯ ಎಎಸ್‌ಐ ರಂಗಸ್ವಾಮಿ (59)ಠಾಣೆಯಲ್ಲಿ ಕರ್ತವ್ಯನಿರತರಾಗಿದ್ದಾಗಲೇ ಹೃದಯಾಘಾತದಿಂದ ಶನಿವಾರ ನಿಧನರಾದರು.

ಇವರು ಜೆ.ಸಿ.ನಗರ ಠಾಣೆಯಲ್ಲಿ ಹಲವು ವರ್ಷಗಳಿಂದಎಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಧ್ಯಾಹ್ನ ಎಂದಿನಂತೆ ಊಟ ಮುಗಿಸಿ, ಶೂ ಧರಿಸುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದರು. ಠಾಣೆಯಲ್ಲಿದ್ದ ಸಿಬ್ಬಂದಿ ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಅವರು ಹೃದಯಾಘಾತದಿಂದ ಮತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

‘ಪೀಣ್ಯ ಎರಡನೇ ಹಂತದಲ್ಲಿ ವಾಸವಿದ್ದ ಇವರಿಗೆ ಪತ್ನಿ ಹಾಗೂ ಮೂವರು ಮಕ್ಕಳು ಇದ್ದಾರೆ. ಮುಂದಿನ ಅಕ್ಟೋಬರ್‌ನಲ್ಲಿರಂಗಸ್ವಾಮಿ ಅವರು ನಿವೃತ್ತಿ ಹೊಂದಬೇಕಿತ್ತು’ ಎಂದು ಸಹೋದ್ಯೋಗಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.