
ಪ್ರಜಾವಾಣಿ ವಾರ್ತೆ
ಬೆಂಗಳೂರು: ಜೆ.ಸಿ.ನಗರ ಪೊಲೀಸ್ ಠಾಣೆಯ ಎಎಸ್ಐ ರಂಗಸ್ವಾಮಿ (59)ಠಾಣೆಯಲ್ಲಿ ಕರ್ತವ್ಯನಿರತರಾಗಿದ್ದಾಗಲೇ ಹೃದಯಾಘಾತದಿಂದ ಶನಿವಾರ ನಿಧನರಾದರು.
ಇವರು ಜೆ.ಸಿ.ನಗರ ಠಾಣೆಯಲ್ಲಿ ಹಲವು ವರ್ಷಗಳಿಂದಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಧ್ಯಾಹ್ನ ಎಂದಿನಂತೆ ಊಟ ಮುಗಿಸಿ, ಶೂ ಧರಿಸುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದರು. ಠಾಣೆಯಲ್ಲಿದ್ದ ಸಿಬ್ಬಂದಿ ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಅವರು ಹೃದಯಾಘಾತದಿಂದ ಮತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.
‘ಪೀಣ್ಯ ಎರಡನೇ ಹಂತದಲ್ಲಿ ವಾಸವಿದ್ದ ಇವರಿಗೆ ಪತ್ನಿ ಹಾಗೂ ಮೂವರು ಮಕ್ಕಳು ಇದ್ದಾರೆ. ಮುಂದಿನ ಅಕ್ಟೋಬರ್ನಲ್ಲಿರಂಗಸ್ವಾಮಿ ಅವರು ನಿವೃತ್ತಿ ಹೊಂದಬೇಕಿತ್ತು’ ಎಂದು ಸಹೋದ್ಯೋಗಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.