ADVERTISEMENT

ಹಲ್ಲೆ ಆರೋಪ: ರಮೇಶ್ ಸೇರಿ ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 22 ಜನವರಿ 2020, 21:49 IST
Last Updated 22 ಜನವರಿ 2020, 21:49 IST
 ಬಿ.ಸಿ. ರಮೇಶ್
ಬಿ.ಸಿ. ರಮೇಶ್    

ಬೆಂಗಳೂರು: ಮಾಜಿ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ್ತಿ, ಪೊಲೀಸ್‌ ಕಾನ್‌ಸ್ಟೆಬಲ್‌ ಉಷಾರಾಣಿ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಮಾಜಿ ಕಬಡ್ಡಿ ಆಟಗಾರ ಬಿ.ಸಿ. ರಮೇಶ್ ಸೇರಿ ನಾಲ್ವರನ್ನು ಸಂಪಂಗಿರಾಮನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಮುನಿರಾಜು, ತರಬೇತುದಾರ ನರಸಿಂಹ ಮತ್ತು ಷಣ್ಮುಗಂ ಇತರ ಬಂಧಿತರು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಿರಿಯರ ಕಬಡ್ಡಿ ಶಿಬಿರಕ್ಕೆ ಪೊಲೀಸ್ ಅಧಿಕಾರಿಯೊಬ್ಬರು ಅತಿಥಿಯಾಗಿ ಬಂದಿದ್ದರು. ಈ ಅತಿಥಿಯನ್ನು ಕಬಡ್ಡಿ ಆಟಗಾರ್ತಿಯರಿಗೆ ಉಷಾರಾಣಿ ಪರಿಚಯಿಸಿದ್ದರು. ಈ ವಿಷಯದಲ್ಲಿ ರಮೇಶ್ ಮತ್ತು ಉಷಾರಾಣಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಜಗಳ ವಿಕೋಪಕ್ಕೆ ಹೋದಾಗ ರಮೇಶ್, ನರಸಿಂಹ, ಮುನಿರಾಜು, ಷಣ್ಮುಗಂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಂಗಳವಾರ ರಾತ್ರಿ ದೂರು ಉಷಾರಾಣಿ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.