ADVERTISEMENT

ಮೆಟ್ರೊ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2019, 19:31 IST
Last Updated 21 ಜೂನ್ 2019, 19:31 IST

ಬೆಂಗಳೂರು: ಮೈಕೊ ಲೇಔಟ್ ಬಳಿ ಗುರುವಾರ ರಾತ್ರಿ ಮೆಟ್ರೊ ಭದ್ರತಾ ಸಿಬ್ಬಂದಿ ಅನಂತ್ ಚರಣಪಾಲ್ ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ.

ಒಡಿಶಾದ ಅನಂತ್, ಮೆಟ್ರೊ ಕಾಮಗಾರಿ ನಡೆಯುವ ಸ್ಥಳದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದರು.

ಎಚ್‌ಎಸ್‌ಬಿಸಿಯಿಂದ ಅರಕೆರೆ ಮಾರ್ಗದಲ್ಲಿ ಮೆಟ್ರೊ ಕೆಲಸ ನಡೆಯುತ್ತಿದೆ. ಆ ರಸ್ತೆಯಲ್ಲಿ ವಾಹನಗಳ ಓಡಾಟ ನಿರ್ಬಂಧಿಸಲಾಗಿತ್ತು. ಬೈಕ್ ಸವಾರನೊಬ್ಬ, ಆ ರಸ್ತೆಯಲ್ಲೇ ತೆರಳಲು ಮುಂದಾಗಿದ್ದ. ಆತನನ್ನು ಅನಂತ್ ತಡೆದಿದ್ದರು. ಅಷ್ಟಕ್ಕೆ ಕೋಪಗೊಂಡ ಸವಾರ, ಅನಂತ್ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಕೈಗೆ ಇರಿದುಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಂತ್ ಅವರನ್ನು ಸಿಬ್ಬಂದಿಯೇ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಕೊಲೆಗೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.