ADVERTISEMENT

ಶುಲ್ಕ ಪಡೆದು ಮನೆಗೆ ಪಡಿತರ: ಅಟಲ್‌ ಜೀ ಕೇಂದ್ರದಲ್ಲಿ 800 ಆನ್‌ಲೈನ್ ಸೇವೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 20:20 IST
Last Updated 3 ಜುಲೈ 2021, 20:20 IST
ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಶನಿವಾರ ಮಧ್ಯಂತರ ವರದಿ ಸಲ್ಲಿಸಿ, ಚರ್ಚೆ ನಡೆಸಿತು.
ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಶನಿವಾರ ಮಧ್ಯಂತರ ವರದಿ ಸಲ್ಲಿಸಿ, ಚರ್ಚೆ ನಡೆಸಿತು.   

ಬೆಂಗಳೂರು: ಶುಲ್ಕ ನಿಗದಿ ಮಾಡಿ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡುವುದು, ಆರ್‌ಟಿಒ ಸಂಬಂಧಿತ ಎಲ್ಲ ಸೇವೆಗಳನ್ನು ಕಾಗದ ರಹಿತ ಮಾಡುವುದು ಸೇರಿದಂತೆ ಹಲವು ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ನೇತೃತ್ವದ ಆಡಳಿತ ಸುಧಾರಣಾ ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.

ಕಂದಾಯ ಇಲಾಖೆಯ 800 ಆನ್‌ಲೈನ್ ಸೇವೆಗಳಿಗೆ ಅಟಲ್‌ಜೀ ಜನಸ್ನೇಹಿ ಕೇಂದ್ರಗಳನ್ನು (ಎಜೆಎಸ್‌ಕೆ)ಏಕಗವಾಕ್ಷಿ ವೇದಿಕೆಯಾಗಿಸಿ ಸೇವೆಗಳು ಲಭ್ಯವಾಗುವಂತೆ ಮಾಡಬೇಕು ಎಂದೂ ಪ್ರತಿಪಾದಿಸಿದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಶನಿವಾರ ಮಧ್ಯಂತರ ವರದಿ ಸಲ್ಲಿಸಿರುವ ಆಯೋಗ, ವರದಿಯಲ್ಲಿ ಕಂದಾಯ, ಆಹಾರ ಮತ್ತು ಸಾರಿಗೆ ಇಲಾಖೆಗೆ ಸಂಬಂಧಿಸಿದ ಸುಧಾರಣೆಗೆ ಶಿಫಾರಸುಗಳನ್ನು ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.