
ಪ್ರಜಾವಾಣಿ ವಾರ್ತೆ
ಬೆಂಗಳೂರು: ನಗರದ ಅಶೋಕ ಪಿಲ್ಲರ್ ಬಳಿ ಬುಧವಾರ ಮಧ್ಯಾಹ್ನ ಎಟಿಎಂಗೆ ಹಣ ತುಂಬುವ ವಾಹನದಲ್ಲಿ ಹಣ ದರೋಡೆಯಾಗಿದ್ದು, ₹ 7 ಕೋಟಿ ಹಣವಿತ್ತು ಎಂದು ಅಂದಾಜಿಸಲಾಗಿದೆ.
ಜೆಪಿ ನಗರದ ಎಚ್ಡಿಎಫ್ಸಿ ಬ್ಯಾಂಕ್ನಿಂದ ಸಿಎಂಎಸ್ ವಾಹನದಲ್ಲಿ ಹಣ ತರುತ್ತಿದ್ದ ವೇಳೆ ಇನ್ನೊವಾ ಕಾರಿನಲ್ಲಿ ಬಂದಿದ್ದ ದರೋಡೆಕೋರರು, ತೆರಿಗೆ ಇಲಾಖೆ ಅಧಿಕಾರಿಗಳು ಎಂದು ಬಿಂಬಿಸಿಕೊಂಡಿದ್ದು, ಹಣಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದಾರೆ.
ಈ ವೇಳೆ ಹಣದ ಸಮೇತ ಸಿಬ್ಬಂದಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗಿರುವ ದರೋಡೆಕೋರರು, ಬಳಿಕ ಡೇರಿ ವೃತ್ತದಲ್ಲಿ ಸಿಎಂಎಸ್ ಸಿಬ್ಬಂದಿಯನ್ನು ಬಿಟ್ಟು ಹಣದೊಂದಿಗೆ ಪರಾರಿಯಾಗಿದ್ದಾರೆ.
ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.