ADVERTISEMENT

ಚೂರಿ ಇರಿತ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2020, 19:59 IST
Last Updated 29 ಫೆಬ್ರುವರಿ 2020, 19:59 IST
   

ಬೆಂಗಳೂರು: ಫುಡ್ ಆರ್ಡರ್ ವಿಷಯಕ್ಕೆ ನಡೆದ ಜಗಳದ ವೇಳೆ ಯುವಕನಿಗೆ ಚೂರಿಯಿಂದ ಇರಿದು ಗಂಭೀರವಾಗಿ ಹಲ್ಲೆ ನಡೆಸಿದ ಇಬ್ಬರು ಡೆಲಿವರಿ ಬಾಯ್‌ಗಳನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ತುಮಕೂರಿನ ತೇಜಸ್ ಮತ್ತು ಪ್ರವೀಣ್ ಬಂಧಿತರು. ಎಂ.ಎಸ್. ಪಾಳ್ಯದ ನಿವಾಸಿ ಸುನೀಲ್ ಹಲ್ಲೆಗೆ ಒಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಟಿಎಂ ಲೇಔಟ್‌ನ ಪೇಯಿಂಗ್ ಗೆಸ್ಟ್‌ ಕಟ್ಟಡದಲ್ಲಿ (ಪಿಜಿ) ಸುನೀಲ್ ನೆಲೆಸಿದ್ದಾನೆ. ಶುಕ್ರವಾರ (ಫೆ.28) ರಾತ್ರಿ ಸ್ನೇಹಿತರ ನಡುವೆ ಫುಡ್ ಆರ್ಡರ್ ವಿಚಾರಕ್ಕೆ ಗಲಾಟೆ ನಡೆದಿತ್ತು. ಬಳಿಕ ತೇಜಸ್ ಮತ್ತು ಪ್ರವೀಣ್ ಚೂರಿಯಿಂದ ಇರಿದು ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸುನೀಲ್, ಬಿಟಿಎಂ ಲೇಔಟ್‌ನ ಒಂದನೇ ಕ್ರಾಸ್‌ನಲ್ಲಿ ರಸ್ತೆ ಬದಿ ಬಿದ್ದಿದ್ದ.

ನಸುಕಿನ 5 ಗಂಟೆ ಸುಮಾರಿಗೆ ಸುನೀಲ್‌ನ ಸ್ನೇಹಿತ ನಾಗರಾಜ್ ಎಂಬಾತ ಫುಡ್ ಡೆಲಿವರಿ ಮಾಡಿ ಪಿಜಿ ಕಟ್ಟಡಕ್ಕೆ ಮರಳುತ್ತಿದ್ದಾಗ ಜನರು ಗುಂಪು ಸೇರಿದ್ದರು. ಅಲ್ಲಿಗೆ ಹೋಗಿ ನೋಡಿದಾಗ ಗಾಯಗೊಂಡು ಬಿದ್ದಿದ್ದ ವ್ಯಕ್ತಿ ಸ್ನೇಹಿತ ಸುನೀಲ್ ಎಂದು ಗೊತ್ತಾಗಿದೆ. ಅಲ್ಲದೆ, ಆತನಿಗೆ ಗಂಭೀರ ಗಾಯಗಳಾಗಿರುವುದು ಕಂಡುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.