ಬೆಂಗಳೂರು:ರೌಡಿಶೀಟರ್ ಆಟೊ ಸುನೀಲ್ನನ್ನು (27) ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಹೊನ್ನಿ ಶ್ರೀಧರ್ನನ್ನು ಭಾನುವಾರ ರಾತ್ರಿ ಕಾಲಿಗೆ ಗುಂಡು ಹಾರಿಸಿ ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಬೊಮ್ಮನಹಳ್ಳಿ ಠಾಣೆ ರೌಡಿಶೀಟರ್ ಶ್ರೀಧರ್, ಕೊಲೆ ಬಳಿಕ ತಲೆಮರೆಸಿಕೊಂಡಿದ್ದ. ಗುಂಡೇಟಿನಿಂದ ಗಾಯಗೊಂಡಿ
ರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಭಾನುವಾರ ರಾತ್ರಿ ಕೊಪ್ಪ ರಸ್ತೆಯ ನಿರ್ಜನ ಪ್ರದೇಶದಲ್ಲಿ ಶ್ರೀಧರ್ ಕಾಣಿಸಿಕೊಂಡಿದ್ದ.ಬಂಧಿಸಲು ಹೋಗಿದ್ದ ಹೆಡ್ಕಾನ್ಸ್ಟೆಬಲ್ ಮೇಲೆಯೇ ಹಲ್ಲೆ ಮಾಡಿದ್ದ. ರಕ್ಷಣೆಗೆ ಹೋದ ಇನ್ಸ್ಪೆಕ್ಟರ್ ಎಸ್.ಎಸ್. ಮಂಜು, ಶ್ರೀಧರ್ನ ಬಲಗಾಲಿಗೆ ಗುಂಡು ಹೊಡೆದು ಸೆರೆಹಿಡಿದಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.