ADVERTISEMENT

ಆರ್ಟ್‌ ಆಫ್‌ ಲಿವಿಂಗ್‌ನಿಂದ ‘ಶ್ರೀ ಶ್ರೀ ಶಿಕ್ಷಣ ಪ್ರಶಸ್ತಿ’ ಪ್ರದಾನ

​ಪ್ರಜಾವಾಣಿ ವಾರ್ತೆ
Published 27 ಜನವರಿ 2024, 15:31 IST
Last Updated 27 ಜನವರಿ 2024, 15:31 IST
ನಗರದ ಆರ್ಟ್‌ ಆಫ್‌ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಶನಿವಾರ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರ ಟ್ರಸ್ಟ್ ವತಿಯಿಂದ ಸಾಧಕರಿಗೆ ‘ಶ್ರೀ ಶ್ರೀ ಶಿಕ್ಷಣ ಪ್ರಶಸ್ತಿ’ ಪ್ರದಾನ ಮಾಡಲಾಯಿತು
ನಗರದ ಆರ್ಟ್‌ ಆಫ್‌ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಶನಿವಾರ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರ ಟ್ರಸ್ಟ್ ವತಿಯಿಂದ ಸಾಧಕರಿಗೆ ‘ಶ್ರೀ ಶ್ರೀ ಶಿಕ್ಷಣ ಪ್ರಶಸ್ತಿ’ ಪ್ರದಾನ ಮಾಡಲಾಯಿತು   

ಬೆಂಗಳೂರು: ಪಠ್ಯಕ್ಕೆ ಸೀಮಿತಗೊಳ್ಳದೇ ನೈಜ ಶಿಕ್ಷಣ ನೀಡುತ್ತಿರುವ ದೇಶದ ವಿವಿಧ ರಾಜ್ಯಗಳ ಅತ್ಯುತ್ತಮ ಶಿಕ್ಷಕರನ್ನು ‘ಶ್ರೀ ಶ್ರೀ ಶಿಕ್ಷಣ ಪ್ರಶಸ್ತಿ’ ಮೂಲಕ ಗುರುತಿಸಲಾಗಿದೆ ಎಂದು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ ಗುರೂಜಿ ತಿಳಿಸಿದರು.

ಆರ್ಟ್‌ ಆಫ್‌ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಶನಿವಾರ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರ ಟ್ರಸ್ಟ್ ಹಮ್ಮಿಕೊಂಡಿದ್ದ ‘ಶ್ರೀ ಶ್ರೀ ಶಿಕ್ಷಣ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೆಲಸವೇ ಧ್ಯೇಯ ಎಂಬ ನಂಬಿಕೆಯಿಂದ ನಮ್ಮ ಟ್ರಸ್ಟಿಗಳು ಕೆಲಸ ಮಾಡುತ್ತಾರೆ. ದೇಶದ ಎಲ್ಲ ಶಾಲೆಗಳು ನಮ್ಮವೇ ಆಗಿದ್ದು, ಅವುಗಳ ಅಭಿವೃದ್ಧಿ ಮತ್ತು ಉತ್ಕೃಷ್ಟತೆಗಾಗಿ ಶ್ರಮಿಸುತ್ತೇವೆ’ ಎಂದು ಹೇಳಿದರು.

ADVERTISEMENT

‌ಕೇಂದ್ರ ಶಿಕ್ಷಣ ಸಚಿವ ಸುಭಾಷ್ ಸರ್ಕಾರ್‌ ಮಾತನಾಡಿ, ‘ನಮ್ಮ ನಾಗರಿಕತೆಯು ನೀಡಿರುವ ಎಲ್ಲ ಕೊಡುಗೆಗಳ ಬಗ್ಗೆ ಗೌರವ ಇಟ್ಟುಕೊಳ್ಳಬೇಕು. ಪ್ರಾಚೀನ ವಿಜ್ಞಾನವಾದ ಯೋಗವನ್ನೂ ಹೆಮ್ಮೆಯ ಭಾವದಿಂದ ನೋಡಬೇಕು’ ಎಂದು ಸಲಹೆ ನೀಡಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘ಆರ್ಟ್‌ ಆಫ್ ಲಿವಿಂಗ್‌ ಸಮಗ್ರ ಶಿಕ್ಷಣವನ್ನು ಭಾರತದಾದ್ಯಂತ ನೀಡುತ್ತಿದ್ದು, 1200 ಉಚಿತ ಶಾಲೆಗಳನ್ನು ನಡೆಸುತ್ತಿದೆ. ಒಂದು ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳು ಉಚಿತವಾಗಿ ಶಿಕ್ಷಣ ಪಡೆಯುತ್ತಿದ್ದಾರೆ’ ಎಂದು ಶ್ಲಾಘಿಸಿದರು.

ತುಮಕೂರಿನ ಸರ್ಕಾರಿ ಸಂಯೋಜಿತ ಪ್ರೌಢಶಾಲೆಯ ಪ್ರಾಂಶುಪಾಲ ಎಸ್. ಕೃಷ್ಣಪ್ಪ, ಮಹಾರಾಷ್ಟ್ರದ ದತ್ತಾತ್ರೇಯ ವಾರೆ, ಗುರುಗ್ರಾಮದ ರಷ್ಮಿ ಶ್ರೀವಾಸ್ತವ್ ಸಹಿತ ಅನೇಕ ಸಾಧಕರಿಗೆ, ವಿವಿಧ ಶೈಕ್ಷಣಿಕ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.