ADVERTISEMENT

ಆಯುಧ ಪೂಜೆ, ವಿಜಯ ದಶಮಿ ಸಂಭ್ರಮ

ನವ ಉಲ್ಲಾಸ ಮೂಡಿಸಿದ ಹಬ್ಬ: ದೇವಿ ಪೂಜೆ, ವಿಶೇಷ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2021, 20:13 IST
Last Updated 15 ಅಕ್ಟೋಬರ್ 2021, 20:13 IST
ನಗರದಲ್ಲಿ ಶುಕ್ರವಾರ ಬೆಂಗಾಲಿ ಸಮುದಾಯದ ಜನರು ನವರಾತ್ರಿ ಆಚರಣೆ ಸಂದರ್ಭದಲ್ಲಿ ಪ್ರತಿಷ್ಠಾಪಿಸಿದ್ದ ದುರ್ಗಾ ದೇವಿ ವಿಗ್ರಹಗಳನ್ನು ಹಲಸೂರು ಕೆರೆಯಲ್ಲಿ ಬಿಬಿಎಂಪಿ ಸಿಬ್ಬಂದಿ ನೆರವಿನೊಂದಿಗೆ ವಿಸರ್ಜಿಸಿದರು – ಪ್ರಜಾವಾಣಿ ಚಿತ್ರ/ ರಂಜು ಪಿ.
ನಗರದಲ್ಲಿ ಶುಕ್ರವಾರ ಬೆಂಗಾಲಿ ಸಮುದಾಯದ ಜನರು ನವರಾತ್ರಿ ಆಚರಣೆ ಸಂದರ್ಭದಲ್ಲಿ ಪ್ರತಿಷ್ಠಾಪಿಸಿದ್ದ ದುರ್ಗಾ ದೇವಿ ವಿಗ್ರಹಗಳನ್ನು ಹಲಸೂರು ಕೆರೆಯಲ್ಲಿ ಬಿಬಿಎಂಪಿ ಸಿಬ್ಬಂದಿ ನೆರವಿನೊಂದಿಗೆ ವಿಸರ್ಜಿಸಿದರು – ಪ್ರಜಾವಾಣಿ ಚಿತ್ರ/ ರಂಜು ಪಿ.   

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕ ಕಾಯಿಲೆಯಿಂದ ತತ್ತರಿಸಿದ್ದ ಜನತೆಗೆ ಈ ಬಾರಿಯ ದಸರಾ ನವ ಉಲ್ಲಾಸ ಮೂಡಿಸಿತು.

ಧಾರ್ಮಿಕ ಮತ್ತು ಸಂಸ್ಕೃತಿಯ ಆಚರಣೆಯ ಸಮ್ಮಿಲನವಾದ ಈ ನಾಡಹಬ್ಬವನ್ನು ಸಂಭ್ರಮದಿಂದ ಸರಳವಾಗಿ ಆಚರಿಸಿದರು. ಆಯುಧ ಪೂಜೆ ಮತ್ತು ವಿಜಯ ದಶಮಿಯನ್ನು ಜನತೆ ಸಂತಸದಿಂದ ಆಚರಿಸಿ ಸಂಭ್ರಮಿಸಿದರು. ವಾಹನಗಳು, ಕಚೇರಿ, ಮನೆಯಲ್ಲಿರುವ ವಸ್ತುಗಳನ್ನು ಹೂವುಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು.

ಬೆಂಗಾಲಿ ಸಮುದಾಯದ ಜನರು ನವರಾತ್ರಿ ಆಚರಣೆ ಸಂದರ್ಭದಲ್ಲಿ ಪ್ರತಿಷ್ಠಾಪಿಸಿದ್ದ ದುರ್ಗಾ ವಿಗ್ರಹಗಳನ್ನು ಹಲಸೂರು ಕೆರೆಯಲ್ಲಿ ಶುಕ್ರವಾರ ವಿಸರ್ಜಿಸಿದರು. ಮೆರವಣಿಗೆಯಲ್ಲಿ ಸಾಗಿದ ಜನರು ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ADVERTISEMENT

ಇಸ್ಕಾನ್‌ನಲ್ಲಿಯೂ ಶ್ರದ್ಧಾಭಕ್ತಿಯಿಂದ ವಿಜಯದಶಮಿ ಆಚರಿಸಲಾಯಿತು. ಶ್ರೀ ಕೃಷ್ಣ ಬಲರಾಮ ದೇವರಿಗೆ ರಾಮ-ಲಕ್ಷ್ಮಣರ ಅಲಂಕಾರ ಮಾಡಲಾಗಿತ್ತು ಮತ್ತು ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಇಸ್ಕಾನ್ ಅಧ್ಯಕ್ಷರಾದ ಮಧುಪಂಡಿತ ದಾಸರು ವಿಜಯದಶಮಿ ಹಬ್ಬದ ಕುರಿತು ಪ್ರವಚನ ಮಾಡಿದರು. ಸಂಜೆ ಶ್ರೀರಾಮ ತಾರಕ ಯಜ್ಞ ಹಾಗೂ ಶ್ರೀ ರಾಮ ಕೀರ್ತನೆಗಳನ್ನು ಆಯೋಜಿಸಲಾಗಿತ್ತು.

ಮಲ್ಲೇಶ್ವರದ ಕನ್ಯಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಿರ್ಮಿಸಿರುವ ‘ಸಾಗರ ಕನ್ಯೆ ಶ್ರೀವಾಸವಿ’ ಸೆಟ್‌ ಭಕ್ತಾದಿಗಳ ಗಮನ ಸೆಳೆಯುತ್ತಿದೆ. ರಾತ್ರಿವರೆಗೂ ಭಕ್ತಾದಿಗಳು ಉದ್ದನೇಯ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.

ಆರ್‌.ಟಿ. ನಗರದಲ್ಲಿ ಸಿದ್ಧಾರ್ಥ ಸಾಂಸ್ಕೃತಿಕ ಪರಿಷತ್‌ ವತಿಯಿಂದ ದೇವಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಹಬ್ಬದ ಸಂಭ್ರಮದಿಂದ ಮಾರುಕಟ್ಟೆ ಪ್ರದೇಶಗಳು ಸಹ ಕಳೆಗಟ್ಟಿದ್ದವು. ನಗರದ ಕೆ.ಆರ್‌.ಮಾರುಕಟ್ಟೆ, ಯಶವಂತಪುರ, ಮಲ್ಲೇಶ್ವರ ಮುಂತಾದ ಪ್ರದೇಶಗಳಲ್ಲಿ ಜನಜಂಗುಳಿ ಕಂಡು ಬಂತು.

ಅಂಬೇಡ್ಕರ್‌ ಗುಟ್ಟ: ದಸರಾ ಜಾತ್ರೆ

ಕೆ.ಆರ್.ಪುರ:ಮಹದೇವಪುರ ಕ್ಷೇತ್ರದ ಕಾಡುಗೋಡಿ ವಾರ್ಡ್‌ನ ಅಂಬೇಡ್ಕರ್ ಗುಟ್ಟದಲ್ಲಿ ದಸರಾ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂದಸರಾ ಜಾತ್ರೆ ನೆರವೇರಿತು.

ಅಂಬೇಡ್ಕರ್ ಗುಟ್ಟದ ದಸರಾ ಮೈದಾನಕ್ಕೆ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪಲ್ಲಕ್ಕಿಗಳು

ಗ್ರಾಮದ ಹೆಬ್ಬಾಗಿಲ ಮೂಲಕ ತಮಟೆ ವಾದ್ಯ ಮತ್ತು ಕಳಶಗಳೊಂದಿಗೆ ಸುತ್ತಮುತ್ತಲಿನ ಗ್ರಾಮಗಳಿಂದಯಲ್ಲಮ್ಮ, ಸಪ್ಪಲಮ್ಮ, ಮಾರಮ್ಮ, ಮುನೇಶ್ವರ ಸ್ವಾಮಿ, ಬಸವೇಶ್ವರ ಸ್ವಾಮಿ, ಆಂಜನೇಯ ಸ್ವಾಮಿ, ಮಹಾಗಣಪತಿ ದೇವರುಗಳ ಪಲ್ಲಕ್ಕಿಗಳು
ಮೆರವಣಿಗೆಯೊಂದಿಗೆ ದಸರಾ ಮೈದಾನಕ್ಕೆ ಬಂದವು.

ಪಟ್ಟಂದೂರು ಅಗ್ರಹಾರ, ನಲ್ಲೂರಹಳ್ಳಿ, ರಾಮಗೊಂಡನಹಳ್ಳಿ, ವೈಟ್‌ಫೀಲ್ಡ್‌, ಹಗದೂರು, ಗಾಂಧಿಪುರ, ಇಮ್ಮಡಿಹಳ್ಳಿ, ನಾಗೊಂಡಹಳ್ಳಿ, ಚನ್ನಸಂದ್ರ, ಕಾಡುಗೋಡಿ, ಬೆಳ್ತೂರು, ದಿನ್ನೂರು ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ನೆರೆದಿದ್ದರು.

ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಅರವಿಂದ ಲಿಂಬಾವಳಿ, ‘ಕೋವಿಡ್‌ನಿಂದ ಉತ್ಸವಗಳು ಕಡಿಮೆಯಾಗಿದ್ದವು. ಹಬ್ಬಗಳು ಈ ನೆಲದ ಸಾಂಸ್ಕೃತಿಕ ಚೌಕಟ್ಟು ಹೊಂದಿರುತ್ತವೆ. ಜಾತ್ರೆಗೆ 60ಕ್ಕೂ ಹೆಚ್ಚು ಗ್ರಾಮಗಳಿಂದ ಬಂದಿರುವ ದೇವರುಗಳನ್ನು ಭಕ್ತರು ಕಣ್ತುಂಬಿಕೊಳ್ಳಬೇಕು’ ಎಂದು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.