ADVERTISEMENT

ಬಿ.ಟೆಕ್ ಪದವೀಧರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2021, 3:59 IST
Last Updated 7 ಮಾರ್ಚ್ 2021, 3:59 IST

ಬೆಂಗಳೂರು: ರೈಲಿಗೆ ತಲೆಕೊಟ್ಟು ಬಿ.ಟೆಕ್ ಪದವೀಧರ ಸುನೀಲ್‌ ಕುಮಾರ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಅರವಂತಿಕೆ ಪಾಳ್ಯ ನಿವಾಸಿ ಸುನೀಲ್ ಕುಮಾರ್, ಇತ್ತೀಚೆಗಷ್ಟೇ ಬಿ.ಟೆಕ್ ಪದವಿ ಮುಗಿಸಿದ್ದರು. ಎಂ.ಟೆಕ್ ಪದವಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದರು’ ಎಂದು ರೈಲ್ವೆ ಪೊಲೀಸ್ ಮೂಲಗಳು ಹೇಳಿವೆ.

’ಕೊರೊನಾ ಸೋಂಕಿತರಾಗಿದ್ದ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮಾನಸಿಕವಾಗಿ ನೊಂದಿದ್ದರು. ವಾಯುವಿಹಾರಕ್ಕೆ ಹೋಗುವುದಾಗಿ ಹೇಳಿ ಶುಕ್ರವಾರ ಸಂಜೆ ಮನೆಯಿಂದ ಹೊರಬಂದಿದ್ದರು. ಮನೆಯ ಸಮೀಪದಲ್ಲಿರುವ ಹಳಿ ಬಳಿ ಹೋಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದೂ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.