ADVERTISEMENT

ಬ್ಯಾಕ್‌ಲಾಗ್ ಹುದ್ದೆ: ಸಚಿವ ಸಂಪುಟದ ಉಪಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 19:41 IST
Last Updated 16 ಡಿಸೆಂಬರ್ 2019, 19:41 IST

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್‌ಲಾಗ್‌) ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅಧ್ಯಕ್ಷತೆಯಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ.

ಸದಸ್ಯರಾಗಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಜಗದೀಶ ಶೆಟ್ಟರ್‌,ಎಸ್‌.ಸುರೇಶ್‌ ಕುಮಾರ್‌, ಬಿ.ಶ್ರೀರಾಮುಲು ಇದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ, 1976ಕ್ಕೆ ತಿದ್ದುಪಡಿ ತರಲು ಸೂಕ್ತ ಶಿಫಾರಸು ಮಾಡುವ
ಸಲುವಾಗಿ ಉಪಮುಖ್ಯಮಂತ್ರಿಡಾ.ಸಿ.ಎನ್‌.ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ.

ಸದಸ್ಯರಾಗಿ ಆರ್.ಅಶೋಕ, ಎಸ್‌.ಸುರೇಶ್‌ ಕುಮಾರ್‌, ವಿ.ಸೋಮಣ್ಣ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.