
ಪ್ರಜಾವಾಣಿ ವಾರ್ತೆ
ಬೆಂಗಳೂರು: ಉತ್ತರ ಕರ್ನಾಟಕದ ವೈಭವಮಯ ಸಂಸ್ಕೃತಿ ಪರಂಪರೆಯನ್ನು ಪ್ರತಿಧ್ವನಿಸುವ ಬಾಗಲಕೋಟೆ ಹೋಳಿ ಹಲಗೆ ಮೇಳ–2026 ಕಾರ್ಯಕ್ರಮವನ್ನು ಮಾರ್ಚ್ 1ರಂದು ಸಂಜೆ 5.30ಕ್ಕೆ ರಾಜಾಜಿನಗರ 2ನೇ ಬ್ಲಾಕ್ನಲ್ಲಿರುವ ಕೆ.ಎಲ್.ಇ. ಕಾಲೇಜ್ ಮೈದಾನದಲ್ಲಿ ಆಯೋಜಿಸಲಾಗಿದೆ.
ಬೆಂಗಳೂರು ಚಾಲುಕ್ಯ ಸಾಂಸ್ಕೃತಿಕ ಸಂಘ ಆಯೋಜಿಸಿರುವ ಈ ಹಲಗೆ ಮೇಳದಲ್ಲಿ ಹಲಗೆ, ಶೆಹನಾಯಿ ಸೇರಿದಂತೆ ವಿವಿಧ ಜನಪದ ವಾದ್ಯಗಳ ಸಮ್ಮೇಳನ ಇರಲಿದೆ. ಬಾಗಲಕೋಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ನೂರಾರು ಕಲಾವಿದರು ಭಾಗವಹಿಸಲಿದ್ದಾರೆ. ಎಲ್ಲ ಸಮುದಾಯಗಳ ಜನರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ, ಬಣ್ಣಗಳ ಹಬ್ಬವನ್ನು ಸಂಸ್ಕೃತಿ, ಸಂಗೀತ ಮತ್ತು ಏಕತೆಯೊಂದಿಗೆ ಆಚರಿಸುವ ಉದ್ದೇಶ ಹೊಂದಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.