ಬೆಂಗಳೂರು: ಭದ್ರತಾ ಕಾಯ್ದೆಯ ವೈಯಕ್ತಿಕ ಮುಚ್ಚಳಿಕೆ ಹಾಗೂ ಜಾಮೀನು ನಿಯಮ ಉಲ್ಲಂಘಿಸಿದ ಶಿವಾಜಿನಗರದ ರೌಡಿ ಶಬ್ಬೀರ್ನನ್ನು (26) ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
‘ಶಿವಾಜಿನಗರ ವ್ಯಾಪ್ತಿಯ ಬ್ರಾಡ್ ವೇ ರಸ್ತೆಯ ದರ್ಗಾ ಬಳಿ ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಸಜ್ಜಾಗಿದ್ದ ಆರೋಪದಡಿಶಬ್ಬೀರ್ನನ್ನು ಕಳೆದ ವರ್ಷ ಬಂಧಿಸಲಾಗಿತ್ತು. ಬಳಿಕಜಾಮೀನಿನ ಮೇಲೆ ಶಬ್ಬೀರ್ ಹೊರ ಬಂದಿದ್ದ’ ಎಂದು ಪೊಲೀಸರು ತಿಳಿಸಿದರು.
‘ಶಬ್ಬೀರ್ಗೆ ಒಂದು ವರ್ಷದ ಅವಧಿಗೆ ವೈಯಕ್ತಿಕ ಮುಚ್ಚಳಿಕೆ ಜಾರಿಯಲ್ಲಿತ್ತು. ಈ ಅವಧಿಯಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ತೊಡಗಬಾರದು ಎಂದು ಸೂಚಿಸಲಾಗಿತ್ತು. ಆದರೂಶಬ್ಬೀರ್ ಅಪರಾಧ ಕೃತ್ಯಗಳನ್ನು ಮುಂದುವರಿಸಿದ್ದ’ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.