ADVERTISEMENT

ಸರ್ಕಾರಿ ಬಾಲಮಂದಿರ; ಬಾಲಕರು ಪರಾರಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 19:49 IST
Last Updated 3 ಜನವರಿ 2019, 19:49 IST

ಬೆಂಗಳೂರು: ಇತ್ತೀಚೆಗೆ ಊಟ ಮಾಡಿ ಅಸ್ವಸ್ಥಗೊಂಡಿದ್ದ ನಗರದ ಸರ್ಕಾರಿ ಬಾಲಮಂದಿರದ ಬಾಲಕರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಯಲ್ಲೇ, ಇಬ್ಬರು ಪರಾರಿಯಾಗಿದ್ದಾರೆ.

ಆ ಸಂಬಂಧ ಬಾಲಮಂದಿರದ ಮೇಲ್ವಿಚಾರಕಿ ಸುಧಾರಾಣಿ ನಾಯಕ್, ಸಿದ್ದಾಪುರ ಠಾಣೆಗೆ ದೂರು ನೀಡಿದ್ದಾರೆ.

‘ಡಿ.30ರಂದು ರಾತ್ರಿ 8.45ರ ಸುಮಾರಿಗೆ 105 ಮಕ್ಕಳನ್ನು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗಿತ್ತು. ಅದೇ ವೇಳೆ ನೂಕುನುಗ್ಗಲು ಉಂಟಾಗಿ ಇಬ್ಬರು ಬಾಲಕರು ಪರಾರಿಯಾಗಿದ್ದಾರೆ’ ಎಂದು ಸುಧಾರಾಣಿ, ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.