ಬೆಂಗಳೂರು: ನಗರದ ಹೊರವಲಯದಲ್ಲಿರುವವಾಕ್ ಮತ್ತು ಶ್ರವಣದೋಷ ಹೊಂದಿರುವವರಿಗೆ ಚಿಕಿತ್ಸೆ ನೀಡುವ ಸಲುವಾಗಿ ಡಾ.ಎಸ್.ಆರ್.ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆ ಹಾಗೂರೋಟರಿ ಮಿಡ್ಟೌನ್ ಸಂಸ್ಥೆಯ ಆಶ್ರಯದಲ್ಲಿ ರೂಪಿಸಿರುವ ಸಂಚಾರಿ ಚಿಕಿತ್ಸಾ ಕೇಂದ್ರವನ್ನು ರೋಟರಿ ಸಂಸ್ಥೆಯ ಗವರ್ನರ್ಸಮೀರ್ ಹರಿಯಾನಿ ಉದ್ಘಾಟಿಸಿದರು.
ಹೊರವಲಯದ ವ್ಯಕ್ತಿಗಳನ್ನು ಸಂಪರ್ಕಿಸುವುದು ಹಾಗೂ ಅವರಿಗೆ ಚಿಕಿತ್ಸೆ ಕೊಡುವುದು ಸವಾಲಿನ ಕೆಲಸ. ಹೀಗಾಗಿ, ಸಂಸ್ಥೆಗೆ ಬರಲು ಕಷ್ಟ ಆಗುವವರಿಗೆ ಅನುಕೂಲ ಕಲ್ಪಿಸಲು ಸಂಚಾರಿ ಕೇಂದ್ರ ಆರಂಭಿಸಲಾಗಿದೆ. ಬಸ್ನಲ್ಲಿ ನಾಲ್ಕು ಕಿವಿ ತಪಾಸಣೆ ಮಾಡುವ ಸಾಧನಗಳನ್ನು ಅಳವಡಿಸಲಾಗಿದೆ. ಯಂತ್ರಗಳ ಸಹಾಯದಿಂದ ಶ್ರವಣದೋಷವನ್ನು, ದೇಹದ ಸಮತೋಲನದ ತೊಂದರೆ ಹಾಗೂ ತಲೆ ಸುತ್ತು ಬರುವ ವ್ಯಕ್ತಿಗಳ ಪರೀಕ್ಷೆ ಮಾಡಬಹುದು’ ಎಂದು ಸಂಸ್ಥೆಯ ಮುಖ್ಯಸ್ಥ ಡಾ.ಎಂ.ಎಸ್.ವೆಂಕಟೇಶ್ ಮಾಹಿತಿ ನೀಡಿದರು.
ನಗರದ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶದ ಜನರ ವಾಕ್ ಶ್ರವಣದೋಷವನ್ನು ಪತ್ತೆಹಚ್ಚಿ ಪರಿಹಾರ ನೀಡುವಲ್ಲಿ ಇದು ಸಹಕಾರಿಯಾಗಲಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.