ADVERTISEMENT

ಸಿಎಎ–ಎನ್‌ಆರ್‌ಸಿ ಸಂಯೋಜನೆ ಇಲ್ಲ: ಸಂಸದ ತೇಜಸ್ವಿ ಸೂರ್ಯ

ಪೌರತ್ವ ಕಾಯ್ದೆ ಪರ ಬಲ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2019, 7:52 IST
Last Updated 22 ಡಿಸೆಂಬರ್ 2019, 7:52 IST
ಬೆಂಗಳೂರು ಟೌನ್‌ಹಾಲ್ ಎದುರು ಭಾನುವಾರ ಪೌರತ್ವ ಮಸೂದೆ ಪರ ಬಲ ಪ್ರದರ್ಶನ ನಡೆಯಿತು.
ಬೆಂಗಳೂರು ಟೌನ್‌ಹಾಲ್ ಎದುರು ಭಾನುವಾರ ಪೌರತ್ವ ಮಸೂದೆ ಪರ ಬಲ ಪ್ರದರ್ಶನ ನಡೆಯಿತು.   

ಬೆಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆಬೆಂಬಲಿಸಿ ನೂರಾರು ಮಂದಿ ಟೌನ್‌ಹಾಲ್‌ ಎದುರು ಭಾನುವಾರ ಘೋಷಣೆಗಳನ್ನು ಕೂಗಿದರು. ಕಾಯ್ದೆ ವಿರೋಧಿಸುತ್ತಿರುವವ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ‘ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ಸಂಯೋಜನೆ ಮಾಡುವುದಿಲ್ಲ’ ಎಂದು ನುಡಿದರು.

‘ನಾವು 5 ಶತಕೋಟಿ ರೂಪಾಯಿಯ ಅರ್ಥವ್ಯವಸ್ಥೆ ರೂಪಿಸುವ ಪ್ರಯತ್ನದಲ್ಲಿದ್ದೇವೆ. ನೀವು ಇಷ್ಟು ವರ್ಷ ಪ್ರತಿಪಾದಿಸಿದ ದುರ್ಬಲಜಾತ್ಯತೀತಪರಿಕಲ್ಪನೆ ಅರ್ಥ ಕಳೆದುಕೊಳ್ಳಲಿದೆ’ಎಂದು ಹೇಳಿದರು.

ADVERTISEMENT

ಆರಂಭದಲ್ಲಿಸುಮಾರು 250 ಮಂದಿ ಸೇರಿದ್ದರು. ಸಂಖ್ಯೆ ಕ್ರಮೇಣ ಹೆಚ್ಚಾಯಿತು. ವಿವಿಧ ಘೋಷಣೆಗಳ ಜೊತೆಗೆ ‘ಮೋದಿ’ ‘ಮೋದಿ’ ಎಂದು ಅವರು ಕೂಗುತ್ತಿದ್ದಾರೆ. ‘ಪೌರತ್ವ ತಿದ್ದುಪಡಿ ಕಾಯ್ದೆಯು ಜಾತ್ಯತೀತವಾಗಿದೆ. ಭಾರತವನ್ನು ಜಾತ್ಯತೀತ ಮೂಲಭೂತವಾದಿಗಳಿಂದ ಕಾಪಾಡಬೇಕಿದೆ’ ಎಂದು ಅವರು ತಂದಿರುವ ಭಿತ್ತಿಪತ್ರಗಳು ಹೇಳುತ್ತಿವೆ.

‘ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಕಾಯ್ದೆಗಳು ಪ್ರತ್ಯೇಕವಾದವುಗಳು. ಈ ಕಾಯ್ದೆಗಳಿಂದ ಭಾರತೀಯ ನಾಗರಿಕರಿಗೆ ಯಾವುದೇ ತೊಂದರೆಯಿಲ್ಲ. ಹಿಂದೂ ಅಥವಾ ಮುಸ್ಲಿಮರಿಗೆ ಈ ಕಾಯ್ದೆಗಳಿಂದ ಬಾಧಕವಿಲ್ಲ’ ಎಂದು ಕೆಲವರು‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.