ಬೆಂಗಳೂರು: ಜಯನಗರ ಬಳಿಯ ಬ್ಯಾಂಕ್ ಆಫ್ ಬರೋಡಾ ಶಾಖೆಯ ಲಾಕರ್ನಲ್ಲಿದ್ದ 1.73 ಕೆ.ಜಿ ತೂಕದ ಚಿನ್ನಾಭರಣ ಕಳವಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
‘ಚಿನ್ನಾಭರಣ ಕಳವು ಸಂಬಂಧ ಶಿವಪ್ರಸಾದ್ ಎಂಬುವರು ದೂರು ನೀಡಿದ್ದಾರೆ’ ಎಂದು ಜಯನಗರ ಪೊಲೀಸರು ಹೇಳಿದರು.
‘ಶಿವಪ್ರಸಾದ್ ಅವರು ₹85 ಲಕ್ಷ ಮೌಲ್ಯದ 1.73 ಕೆ.ಜಿ ಚಿನ್ನಾಭರಣವನ್ನು ಫೆಬ್ರುವರಿಯಲ್ಲಿ ಬ್ಯಾಂಕ್ ಲಾಕರ್ನಲ್ಲಿ ಇರಿಸಿದ್ದರು. ಜುಲೈ 22ರಂದು ಬ್ಯಾಂಕ್ ಲಾಕರ್ ತೆರೆಸಿ ನೋಡಿದಾಗ ಚಿನ್ನಾಭರಣ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಗಾಬರಿಗೊಂಡ ಶಿವಪ್ರಸಾದ್, ಬ್ಯಾಂಕ್ ಸಿಬ್ಬಂದಿಯನ್ನು ಪ್ರಶ್ನಿಸಿದಾಗ ಉತ್ತರ ಸಿಕ್ಕಿಲ್ಲ. ಹೀಗಾಗಿ, ಠಾಣೆಗೆ ದೂರು ನೀಡಿದ್ದಾರೆ. ಬ್ಯಾಂಕ್ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆ ಪಡೆದು ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.