ದೊಡ್ಡಬಳ್ಳಾಪುರ: ಬೆಂಗಳೂರು-ದೊಡ್ಡಬಳ್ಳಾಪುರ ರಸ್ತೆಯ ಬಾಶೆಟ್ಟಿಹಳ್ಳಿ ನಿರ್ಮಿಸಲಾಗಿರುವ ಬೃಹತ್ ಮೇಲ್ಸೆತುವೆ ಗೋಡೆ ಕುಸಿದಿದೆ.
ಸೇತುವೆ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದ್ದು ಸೇತುವೆ ಒಂದು ಬದಿಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೃಹತ್ ಲಾರಿಗಳಿಗೆ ಪರ್ಯಾಯ ಮಾರ್ಗವನ್ನು ಕಲ್ಪಿಸಲಾಗಿದೆ.
ಕಳಪೆ ಕಾಮಗಾರಿಯೇ ಸೇತುವೆಯ ಗೋಡೆ ಕುಸಿತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಸೇತುವೆಯ ಗೋಡೆ ಕುಸಿದಿರುವ ಸಮೀಪದಲ್ಲೇ ರೈಲ್ವೆ ಹಳಿ ಸಹ ಇರುವುದುಅಧಿಕಾರಿಗಳಲ್ಲಿ ಆತಂಕವನ್ನು ಮೂಡಿಸಿದೆ.
ಸೇತುವೆ ಮೇಲೆ ವಾಹನಗಳು ಹೋಗದಂತೆ ನಿಯಂತ್ರಿಸಲು ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.