ADVERTISEMENT

ನಿರ್ವಹಣಾ ಕಾಮಗಾರಿ: ಮೆಟ್ರೊ ರೈಲು ತಾತ್ಕಾಲಿಕ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 27 ಮೇ 2022, 13:01 IST
Last Updated 27 ಮೇ 2022, 13:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮೆಟ್ರೊ ರೈಲು ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣಾ ಕಾಮಗಾರಿಯನ್ನು ಬಿಎಂಆರ್‌ಸಿಎಲ್ ಕೈಗೆತ್ತಿಕೊಂಡಿದ್ದು, ಶನಿವಾರ ರಾತ್ರಿ 9.30ರ ನಂತರ ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ತನಕ ರೈಲುಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.

ಎಂ.ಜಿ.ರಸ್ತೆ ಮತ್ತು ಟ್ರಿನಿಟಿ ಮೆಟ್ರೊ ನಿಲ್ದಾಣಗಳ ನಡುವೆ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಬೈಯಪ್ಪನಹಳ್ಳಿಯಿಂದ ಅಂದು ಕೊನೆಯ ರೈಲು ರಾತ್ರಿ 9.10ಕ್ಕೆ ಹೊರಡಲಿದೆ. ಬೈಯಪ್ಪನಹಳ್ಳಿ ತನಕ ಹೋಗುವ ಕೊನೆಯ ರೈಲು ಕೆಂಗೇರಿ ಮೆಟ್ರೊ ನಿಲ್ದಾಣದಿಂದ 8.40ಕ್ಕೆ, ಕೆಂಪೇಗೌಡ ಮೆಟ್ರೊ ನಿಲ್ದಾಣದಿಂದ 9.10ಕ್ಕೆ ಹೊರಡಲಿದೆ.

ರಾತ್ರಿ 9.30ರ ನಂತರ ಕೆಂಗೇರಿಯಿಂದ ಎಂ.ಜಿ.ರಸ್ತೆ ತನಕ ಮಾತ್ರ ರೈಲುಗಳು ಸಂಚರಿಸಲಿವೆ. ಭಾನುವಾರ ಬೆಳಿಗ್ಗೆ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬೆಳಿಗ್ಗೆ 7 ಗಂಟೆಯಿಂದ ವೇಳಾಪಟ್ಟಿಯಂತೆ ಎಲ್ಲ ಮಾರ್ಗದಲ್ಲೂ ರೈಲುಗಳ ಸಂಚಾರ ಪುನರ್ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.