ADVERTISEMENT

ಬೆಂಗಳೂರು : ಅಪರಿಚಿತ ದುಷ್ಕರ್ಮಿಗಳಿಂದ ದಂಪತಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2019, 7:23 IST
Last Updated 17 ಅಕ್ಟೋಬರ್ 2019, 7:23 IST
   

ಬೆಂಗಳೂರು: ಅಪರಿಚಿತ ದುಷ್ಕರ್ಮಿಗಳು ದಂಪತಿಯನ್ನು ಹತ್ಯೆ ಮಾಡಿದ ಘಟನೆ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗರುಡಾಚಾರ್ ಪಾಳ್ಯದ ಆರ್ ಎಚ್ ಬಿ ಕಾಲೊನಿಯಚಂದ್ರೇಗೌಡ (63) ಮತ್ತು ಅವರ ಪತ್ನಿ ಲಕ್ಷ್ಮಮ್ಮ (55) ಕೊಲೆಯಾದವರು. ಮನೆಯ ಒಳಗೆ ಇಬ್ಬರ ಮೃತದೇಹ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರ ತಂಡ ಮತ್ತು ಶ್ವಾನದಳ ತೆರಳಿ ಪರಿಶೀಲನೆ ನಡೆಸಿದೆ. ದುಷ್ಕರ್ಮಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ವೈಟ್ ಫೀಲ್ಡ್ ವಿಭಾಗದ ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.