ADVERTISEMENT

ಬೆಂಗಳೂರು: ಅಧಿಕಾರ ವಹಿಸಿಕೊಂಡ ನೂತನ ಡಿಸಿಪಿಗಳು

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 8:22 IST
Last Updated 4 ಆಗಸ್ಟ್ 2020, 8:22 IST

ಬೆಂಗಳೂರು: ನಗರದ ಐವರು ಡಿಸಿಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಸೋಮವಾರವಷ್ಟೇ ಆದೇಶ ಹೊರಡಿಸಿದ್ದು, ನೂತನ ಡಿಸಿಪಿಗಳು ಮಂಗಳವಾರ ಅಧಿಕಾರ ವಹಿಸಿಕೊಂಡರು.

ಪಶ್ಚಿಮ ವಿಭಾಗದ ಡಿಸಿಪಿ ಆಗಿ ಸಂಜೀವ ಪಾಟೀಲ, ಕೇಂದ್ರ ವಿಭಾಗದ ಡಿಸಿಪಿ ಆಗಿ ಎಂ.ಎನ್.ಅನುಚೇತ್, ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಆಗಿ ಡಿ. ದೇವರಾಜ್, ಉತ್ತರ ವಿಭಾಗದ ಡಿಸಿಪಿ ಆಗಿ ಧರ್ಮೇಂದ್ರಕುಮಾರ್ ಮೀನಾ ಹಾಗೂ ದಕ್ಷಿಣ ವಿಭಾಗದ ಡಿಸಿಪಿ ಆಗಿ ಹರೀಶ್ ಪಾಂಡೆ ಅಧಿಕಾರ ಸ್ವೀಕರಿಸಿದರು.

ತಮ್ಮ ವಿಭಾಗದ ಕಚೇರಿಗೆ ಆಗಮಿಸಿದ ನೂತನ ಡಿಸಿಪಿಗಳು, ನಿರ್ಗಮಿತ ಡಿಸಿಪಿಗಳಿಂದ ಬ್ಯಾಟನ್ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.