ADVERTISEMENT

ಬೆಂಗಳೂರು: ರೌಡಿ ಮೇಲೆ ಬ್ಯಾಂಕ್‌ನಲ್ಲೇ ಮಾರಕಾಸ್ತ್ರಗಳಿಂದ ದಾಳಿ‌ ಮಾಡಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 10:23 IST
Last Updated 19 ಜುಲೈ 2021, 10:23 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೋರಮಂಗಲ 8ನೇ ಹಂತದಲ್ಲಿರುವ ಯೂನಿಯನ್ ಬ್ಯಾಂಕ್‌ನಲ್ಲಿ ರೌಡಿ ಬಬ್ಲಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ‌ಮಾಡಲಾಗಿದೆ.

ರೌಡಿಶೀಟರ್ ಬಬ್ಲಿ ಪತ್ನಿ‌ ಜೊತೆ ಸೋಮವಾರ ಬ್ಯಾಂಕ್‌ಗೆ ಬಂದಿದ್ದ. ಅದೇ ಸಂದರ್ಭದಲ್ಲೇ ದುಷ್ಕರ್ಮಿಗಳು ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.

ಆಡುಗೋಡಿ ಠಾಣೆ ರೌಡಿ ಪಟ್ಟಿಯಲ್ಲಿ ಬಬ್ಲಿ ಹೆಸರಿತ್ತು. ಸ್ಥಳೀಯ ರಾಜೇಂದ್ರ ಕೊಳಚೆ ಪ್ರದೇಶದಲ್ಲಿ ಕಚೇರಿ ಹೊಂದಿದ್ದ ಬಬ್ಲಿ, ಅಕ್ರಮವಾಗಿ ಮತಾಂತರದಲ್ಲಿ ತೊಡಗಿದ್ದ ಮಾಹಿತಿ ಇತ್ತು. ಎದುರಾಳಿ ತಂಡದವರು ಕೃತ್ಯ ಎಸಗಿರುವ ಮಾಹಿತಿ ಇದೆ.

ADVERTISEMENT

ಹತ್ಯೆ ಸಂಬಂಧ ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.