ADVERTISEMENT

ಬೆಂಗಳೂರು ದಕ್ಷಿಣ: ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2019, 8:45 IST
Last Updated 26 ಮಾರ್ಚ್ 2019, 8:45 IST
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ಅವರು ನಾಮಪತ್ರ ಸಲ್ಲಿಸಿದರು
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ಅವರು ನಾಮಪತ್ರ ಸಲ್ಲಿಸಿದರು   

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ಅವರು ನಾಮಪತ್ರ ಸಲ್ಲಿಸಿದರು.

ಶಾಸಕರಾದ ಎಂ.ಕೃಷ್ಣಪ್ಪ, ರಾಮಲಿಂಗ ರೆಡ್ಡಿ, ಸೌಮ್ಯರೆಡ್ಡಿ, ಶರವಣ, ಮೇಯರ್ ಗಂಗಾಬಿಕೆ ಸಾಥ್ ನೀಡಿದ್ದರು.

ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪ್ರಚಾರ ಜಾಥಾದಲ್ಲಿ ಅವರು ಜಯನಗರದ ೨ನೇ ಬ್ಲಾಕ್ ನಲ್ಲಿರುವ ಚುನಾವಣಾ ಅಧಿಕಾರಿ ಕಚೇರಿಯವರೆಗೂ ಸಾವಿರಾರು ಕಾರ್ಯಕರ್ತರೊಂದಿಗೆ ಬಂದರು.

ADVERTISEMENT

ಜಾಥಾದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಚಿನ್ಹೆಯ ಬಾವುಟಗಳು ರಾರಾಜಿಸುತ್ತಿದ್ದವು. ಡೊಳ್ಳುಗಳ ನಾದ, ವೀರಗಾಸೆಯ ಕುಣಿತ ದಾರಿಹೋಕರ ಗಮನ ಸೆಳೆದವು. ಪಟಾಕಿಗಳ ಸದ್ದಿನೊಂದಿಗೆ, ಕೈ ಪಕ್ಷಕ್ಕೆ ಜೈಕಾರಗಳು ಮೊಳಗಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.