ADVERTISEMENT

ಬೆಂಗಳೂರು ವಿವಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿ ದೇಣಿಗೆ

​ಪ್ರಜಾವಾಣಿ ವಾರ್ತೆ
Published 18 ಮೇ 2020, 12:04 IST
Last Updated 18 ಮೇ 2020, 12:04 IST
ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರ ಒಂದು ತಿಂಗಳ  ಸಂಬಳ ದೇಣಿಗೆ ನೀಡಿದರು.
ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರ ಒಂದು ತಿಂಗಳ  ಸಂಬಳ ದೇಣಿಗೆ ನೀಡಿದರು.   

ಬೆಂಗಳೂರು: ಕೋವಿಡ್-19 ಪರಿಸ್ಥಿತಿಯ ಕಾರಣ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರ ಒಂದು ತಿಂಗಳ ಸಂಬಳ ದೇಣಿಗೆ ನೀಡಿದರು.

ಕೋವಿಡ್-19 ಕೊರೊನಾ ವೈರಸ್ ಸೋಂಕು ರೋಗದ ಹತೋಟಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಕ ಹಾಗೂ ಶಿಕ್ಷೇತರ ನೌಕರರ ಒಂದು ದಿನದ ಸಂಬಳದ ಒಟ್ಟು ಮೊತ್ತ ₹ 24,62,879-00 ಮತ್ತು ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರ ಒಂದು ತಿಂಗಳಿನ ವೈಯಕ್ತಿಕ ಸಂಬಳ ₹ 1,64,998-00ಗಳನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಲಾಯಿತು.

ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರು ಮುಖ್ಯಮಂತ್ರಿಯವರಿಗೆ ಚೆಕ್ಗಳನ್ನು ಸೋಮವಾರ ಹಸ್ತಾಂತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.