ADVERTISEMENT

ಬೆಂಗಳೂರು ವಿವಿ ನಿರ್ದೇಶಕರು, ವಿಶೇಷ ಅಧಿಕಾರಿಗಳು, ಸಮನ್ವಯಾಧಿಕಾರಿಗಳ ಬದಲಾವಣೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 21:07 IST
Last Updated 25 ಜನವರಿ 2023, 21:07 IST
   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ವಿವಿಧ ವಿಭಾಗಗಳ ನಿರ್ದೇಶಕರು, ವಿಶೇಷ ಅಧಿಕಾರಿಗಳು ಮತ್ತು ಸಮನ್ವಯಾಧಿಕಾರಿಗಳನ್ನು ಬದಲಾಯಿಸಲಾಗಿದೆ.

ಮಂಗಳವಾರ ನಡೆದ ಸಿಂಡಿಕೇಟ್‌ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ವಿವಿಧ ವಿಭಾಗಗಳಿಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ನಿರ್ದೇಶಕರು, ಸಮನ್ವಯಾಧಿಕಾರಿ ಮತ್ತು ವಿಶೇಷಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಸದ್ಯ ಈ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಹೊಸಬರಿಗೆ ಅಧಿಕಾರ ಹಸ್ತಾಂತರಿಸಬೇಕು ಎಂದು ಕುಲಸಚಿವರು ಸೂಚಿಸಿದ್ದಾರೆ.

ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕರನ್ನಾಗಿ ಪ್ರೊ.ಅಶೋಕ್‌ ಡಿ. ಹಂಜಗಿ, ಪ್ರಸಾರಂಗ ಮತ್ತು ಪ್ರಿಂಟಿಂಗ್‌ ಪ್ರೆಸ್‌ ನಿರ್ದೇಶಕರನ್ನಾಗಿ ಪ್ರೊ. ಎಂ. ನಾರಾಯಣಸ್ವಾಮಿ, ವಿದ್ಯಾರ್ಥಿ ಕಲ್ಯಾಣ ನಿರ್ದೇಶಕರನ್ನಾಗಿ ಪ್ರೊ. ಕೆ. ರಾಮಕೃಷ್ಣಯ್ಯ, ಡಾ.ಬಿ.ಆರ್‌. ಅಂಬೇಡ್ಕರ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರನ್ನಾಗಿ ಪ್ರೊ.ಸಿ.ಬಿ. ಹೊನ್ನು ಸಿದ್ಧಾರ್ಥ ಅವರನ್ನು ನೇಮಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.