ಬೆಂಗಳೂರು: ಗಲಭೆ ಪ್ರಕರಣದ ಸಂಚಿನಲ್ಲಿ ಭಾಗಿಯಾಗಿರುವ ಆರೋಪದ ಸಂಬಂಧ ಬಿಬಿಎಂಪಿ ಸದಸ್ಯರಾದ ಸಂಪತ್ ರಾಜ್ ಹಾಗೂಜಾಕಿರ್ಅವರನ್ನು ಸಿಸಿಬಿ ಪೊಲೀಸರು ಮಂಗಳವಾರ ವಿಚಾರಣೆ ನಡೆಸಿದ್ದಾರೆ.
ಸೋಮವಾರ ನೋಟಿಸ್ ಪಡೆದಿದ್ದ ಇಬ್ಬರೂ ಮಂಗಳವಾರ ಬೆಳಿಗ್ಗೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬಂದು ತನಿಖಾಧಿಕಾರಿ ಎದುರು ಹಾಜರಾದರು. ಆರು ಗಂಟೆ ವಿಚಾರಣೆ ನಡೆಸಿದ ಅಧಿಕಾರಿಗಳು, ಲಿಖಿತ ಹೇಳಿಕೆ ಪಡೆದು ವಾಪಸ್ ಕಳುಹಿಸಿದರು.
‘ಶಾಸಕರ ವಿರುದ್ಧ ಪ್ರತಿಭಟನೆಗೆ ಹಾಗೂ ಗಲಭೆಗೆ ಕುಮ್ಮಕ್ಕು ನೀಡಿಲ್ಲ. ಗಲಭೆ ಬಗ್ಗೆ ವಾರ್ಡ್ನ ಕೆಲ ಯುವಕರು ನಮಗೆ ಕರೆ ಮಾಡಿ ಮಾತಾಡಿರುವುದು ನಿಜ. ಗಲಭೆಗೆ ನಾವು ಕುಮ್ಮಕ್ಕು ನೀಡುವ ಮಾತಾಡಿಲ್ಲ. ನಮ್ಮ ಜತೆ ಸಂಪರ್ಕದಲ್ಲಿದ್ದ ಯುವಕರು ಗಲಭೆಯಲ್ಲಿ ತೊಡಗಿರಬಹುದು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ. ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ’ ಎಂದು ಪಾಲಿಕೆ ಸದಸ್ಯರಿಬ್ಬರು 20 ಪುಟಗಳ ಹೇಳಿಕೆಯಲ್ಲಿ ತಿಳಿಸಿರುವುದಾಗಿ ಗೊತ್ತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.