ಬೆಂಗಳೂರು: ಸಂಕ್ರಾಂತಿ ಹಬ್ಬದ (ಜ.15) ಪ್ರಯುಕ್ತ ಪ್ರವಾಸಿಗರ ಅನುಕೂಲಕ್ಕಾಗಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಪ್ರತಿ ಮಂಗಳವಾರಈ ಉದ್ಯಾನವನಕ್ಕೆ ರಜೆ ಇರುತ್ತದೆ. ಆದರೆ, ಸಂಕ್ರಾತಿ ಹಬ್ಬವೂ ಅಂದೇ ಇರುವುದರಿಂದ ಅವಕಾಶ ನೀಡಲಾಗಿದೆ. ಅಲ್ಲದೆ, ರಜೆಯ ಕಾರಣ ಪ್ರವಾಸಿಗರು ಹೆಚ್ಚಾಗಿ ಆಗಮಿಸಲಿದ್ದಾರೆ.
ಎಂದಿನಂತೆ ಹಬ್ಬದ ದಿನವೂ ಉದ್ಯಾನವನದಲ್ಲಿ ಮೃಗಾಲಯ ಸಫಾರಿ ಮತ್ತು ಚಿಟ್ಟೆ ಉದ್ಯಾನವನ ವೀಕ್ಷಣೆಗೆ ಅವಕಾಶ ಇರಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.