ಬೆಂಗಳೂರು: ಚಲಿಸುತ್ತಿದ್ದ ಬೈಕ್ಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರಕ್ಕಿ ನಿವಾಸಿಗಳಾದ ಕೌಶಿಕ್ ಮತ್ತು ಸುಷ್ಮಾ ಮೃತರು.
‘ನಗರದ ಕಾಲೇಜೊಂದರಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಕೌಶಿಕ್, ಊಟಕ್ಕೆಂದು ಸುಷ್ಮಾ ಜೊತೆ ಬೈಕ್ನಲ್ಲಿ ಬನ್ನೇರುಘಟ್ಟಕ್ಕೆ ಹೊರಟಿದ್ದರು. ಊಟ ಮುಗಿಸಿಕೊಂಡು ಕೆಂಪನಾಯಕನಹಳ್ಳಿಯ ಅಕ್ವೇರಲ್ ಗಾರ್ಮೆಂಟ್ಸ್ ಬಳಿ ಸಾಗುತ್ತಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತರಾಗಿದ್ದಾರೆ’ ಎಂದು ಪೊಲೀಸರು
ಹೇಳಿದ್ದಾರೆ.
‘ಚಾಲಕ ಸ್ಥಳದಲ್ಲಿಯೇ ಕ್ಯಾಂಟರ್ ಬಿಟ್ಟು ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.