ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥ ಮಿಕ ಶಾಲಾ ಶಿಕ್ಷಕರ ಸಂಘದ 2020–25ನೇ ಸಾಲಿನ ಅವಧಿಗೆ ಪದಾಧಿಕಾರಿಗಳ ಆಯ್ಕೆಗೆ ನಿಗದಿಪಡಿಸಿದ್ದ ಚುನಾವಣೆಯನ್ನು ಜಿಲ್ಲಾ ನೋಂದಣಾಧಿಕಾರಿಯವರ ನಿರ್ದೇಶನದ ಅನ್ವಯ ರಾಜ್ಯ ಚುನಾವಣಾಧಿಕಾರಿ ತಡೆ ಹಿಡಿದಿದ್ದಾರೆ.
ಸಂಘದ ತಾಲ್ಲೂಕು ಕಾರ್ಯಕಾರಿ ಸಮಿತಿಗೆ ನ. 26ರಿಂದ ಡಿ. 6ರವರೆಗೆ ಹಾಗೂ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಪದಾಧಿಕಾರಿಗಳ ಆಯ್ಕೆಗೆಡಿ.9ರಿಂದ 20ರವರೆಗೆ ಚುನಾವಣೆ ನಿಗದಿಯಾಗಿತ್ತು. ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಸಿ.ಬಿ. ಜಯರಂಗ ಅವರನ್ನು ರಾಜ್ಯ ಚುನಾವಣಾಧಿಕಾರಿಯಾಗಿ ನೇಮಿಸಲಾಗಿತ್ತು.
ಕಾರಣವೇನು?: ‘ಕರಡು ಮತದಾರರ ಪಟ್ಟಿಯನ್ನು ಈವರೆಗೂ ಪ್ರಕಟಿಸದೆ ಚುನಾವಣಾ ಪ್ರಕ್ರಿಯೆ ಆರಂಭಿಸಲಾಗಿದೆ. ಸದಸ್ಯತ್ವ ಶುಲ್ಕ ಪಾವತಿಸಿದರೂ ಮತ ದಾರರ ಪಟ್ಟಿಯಲ್ಲಿ ಹೆಸರು ಸೇರಿಸದೆ ಅನ್ಯಾಯ ಮಾಡಲಾಗಿದೆ. ವರ್ಗಾವಣೆ, ನಿವೃತ್ತ, ಮರಣ ಹೊಂದಿದ ಸದಸ್ಯರ ಹೆಸರು ಪಟ್ಟಿಯಲ್ಲಿದೆ’ ಎಂದು ದೂರ ಲಾಗಿದೆ.
‘ಸರ್ಕಾರ ಘೋಷಿಸಿದ ಹೊಸ ತಾಲ್ಲೂಕುಗಳಲ್ಲಿ ಕೆಲವು ಕಡೆ ಹೊಸ ತಾಲ್ಲೂಕುಗಳನ್ನು ಮಾತ್ರ ವಿಭಜಿಸಿದ್ದು, ಕೆಲವು ಕಡೆ ವಿಭಜಿಸಿಲ್ಲ. ಎಲ್ಲ ತಾಲ್ಲೂಕು, ಜಿಲ್ಲೆಗಳಲ್ಲಿ ಚುನಾವಣಾಧಿ ಕಾರಿಗಳು ಇನ್ನೂ ಚುನಾವಣಾ ಪ್ರಕ್ರಿಯೆ ಆರಂಭಿಸಿಲ್ಲ. ನಿವೃತ್ತ ಹಾಗೂ ಖಾಸಗಿ ವ್ಯಕ್ತಿಗಳಿಂದ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಚುನಾವಣೆಯ ಸ್ಥಳ, ಚುನಾವಣಾ ಆಧಿಕಾರಿಗಳು ಯಾರೆಂದು ಗೊತ್ತಾಗದೆ ಗೊಂದಲವಾಗಿದೆ. ಸಾಮಾನ್ಯ ಚುನಾವಣಾ ಪ್ರಕ್ರಿಯೆಯ ನಿಯಮಗಳನ್ನೂ ಅನುಸರಿಸಿಲ್ಲ. ಚುನಾವಣಾ ಪ್ರಕ್ರಿಯೆ ಪಾರದರ್ಶಕ ವಾಗಿಲ್ಲ’ ಎಂಬ ಕಾರಣಕ್ಕೆತಡೆ ಹಿಡಿಯಲಾಗಿದೆ ಎಂದು ಗೊತ್ತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.